ಆರೋಪಿಯು ವಿಜಯನಗರ ನಿವಾಸಿ ಹಾಗೂ ಕರ್ನಾಟಕ ಬಾರ್ ಆಯಂಡ್ ರೆಸ್ಟೋರೆಂಟ್ ಓನರ್ಸ್ ವುಮೆನ್ ಎಂಪ್ಲಾಯೀಸ್ ಸರ್ವಿಸ್ ಅಸೋಸಿಯೇಶನ್ ಜಂಟಿ ಕಾರ್ಯದರ್ಶಿ ಸುರೇಶ್ ಎಂಬವರಿಗೆ 25 ಲಕ್ಷ ರೂ. ವಂಚಿಸಿದ್ದ. ಈ ಸಂಬಂಧ ದೂರು ದಾಖಲಾದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ತಾನು ಶಿವಮೊಗ್ಗ ಮೂಲದ ಬಿಜೆಪಿ ಮುಖಂಡನಾಗಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಸಹಿತ ಎಲ್ಲ ಸಚಿವರು ಹಾಗೂ ಬಿಜೆಪಿ ಮುಖಂಡರು ಪರಿಚಯವಿದೆ ಎಂದು ಹೇಳಿ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.