ಬೆಂಗಳೂರು: ಕೇಶವ್ ಎಂಬ ಬಿಎಂಟಿಸಿ ನೌಕರ ಡಿಪೋ ಮ್ಯಾನೇಜರ್ ಎದುರೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ
ಬಿಎಂಟಿಸಿ ನೌಕರನೊಬ್ಬ ಡಿಪೋ ಮ್ಯಾನೇಜರ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದಿರಾ ನಗರದ ಡಿಪೋದಲ್ಲಿ ನಡೆದಿದೆ.ಕಳೆದ ಏಪ್ರಿಲ್ ನಲ್ಲಿ ನಡೆದ ಸಾರಿಗೆ ನೌಕರರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕೇಶವ್ ಅವರನ್ನು ಕೆಲಸದಿಂದ ವಜಾ ಮಾಡಲಾಗಿತ್ತು. ಅದಾಗಲೇ ಆರ್ಥಿಕ ಸಂಕಷ್ಟದಲ್ಲಿದ್ದ ಕೇಶವ್ ಕೆಲಸವನ್ನು ಕಳೆದುಕೊಂಡು ಇನ್ನಷ್ಟು ಸಂಕಷ್ಟಕ್ಕೀಡಾಗಿದ್ದರು. ಇದರಿಂದ ಬೇಸತ್ತ ಕೇಶವ್ ಇಂದು ಇಂದಿರಾನಗರದ ಡಿಪೋಗೆ ಬಂದಿದ್ದು, ಮ್ಯಾನೇಜರ್ ಎದುರು ಮಾತನಾಡುತ್ತಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ