ಬೆಂಗಳೂರು, – ಕೊರೊನಾ ಎರಡನೆ ಅಲೆಗೆ ಹೋಲಿಸಿದರೆ ಸದ್ಯ ಪ್ರಕರಣ ಸಂಖ್ಯೆ ಕಡಿಮೆಯಾಗುತ್ತಿದೆ. ಮೂರನೆ ಅಲೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮೈಕ್ರೋ ಕಂಟೈನ್ಮೆಂಟ್ಗಳ ಹೆಚ್ಚಳ ಮಾಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದರು. ಕೊರೊನಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಮೇಲ್ವಿಚಾರಣೆಯಾಗಲಿದೆ. ಕಂಟೈನ್ಮೆಂಟ್ ಐಸೊಲೇಷನ್ ಮೇಲೆ ನಿಗಾ ಇಡಬೇಕಾಗಿದೆ ಎಂದು ಹೇಳಿದರು.
ಮೊಬೈಲ್ ಟ್ರೇಸಿಂಗ್ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಜಾರಿಯಾಗಬೇಕಾಗಿದೆ. ಕೊರೊನಾ ಪಾಸಿಟಿವ್ ಪೇಶೆಂಟ್ ಮೇಲೆ ನಿಗಾ ಇಡುವ ಕೆಲಸವಾಗುತ್ತಿದೆ. ರೋಗಿಗಳ ಸ್ಕ್ರೀನಿಂಗ್ ಉತ್ತಮ ರೀತಿಯಲ್ಲಿ ಮಾಡಲಾಗುತ್ತಿದೆ. ಆಸ್ಪತ್ರೆಗೆ ಸದ್ಯ 20 ರಿಂದ 30 ಜನ ಮಾತ್ರ ದಾಖಲಾಗುತ್ತಿದ್ದಾರೆ ಎಂದು ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುವ ನಿರೀಕ್ಷೆ ಇತ್ತು. ಗಡಿ ಪ್ರದೇಶದ ರಾಜ್ಯಗಳಲ್ಲಿ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ ಆ ಭಾಗದಲ್ಲಿ ಹೆಚ್ಚಿನ ಗಮನ ಹರಿಸಬೇಕಾಗಿದೆ. ರಾಜ್ಯ ಪ್ರವೇಶಿಸುವವರು ಆರ್ಟಿಪಿಸಿಆರ್ ನೆಗೆಟಿವ್ ಇರಬೇಕು. ಒಂದು ವ್ಯಾಕ್ಸಿನ್ ಡೋಸ್ ಆಗಿರಬೇಕು ಎಂಬ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ನೀಡಲಾಗಿದೆ ಎಂದರು.
ಮೂರನೆ ಹಂತದ ವೈಟ್ ಟಾಪಿಂಗ್ ಆರಂಭ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸರ್ಕಾರ ಅನುಮತಿ ನೀಡಿದರೆ ಪಟ್ಟಿ ಪ್ರಕಾರ ಕಾಮಗಾರಿ ನಡೆಯಲಿದೆ ಎಂದು ಅವರು ಹೇಳಿದರು.
ಘನತ್ಯಾಜ್ಯವನ್ನು ಸದ್ಯ ಪಾಲಿಕೆ ನಿರ್ವಹಿಸುತ್ತಿದೆ. ಜಾಹೀರಾತು ಹೊಸ ನಿಯಮ ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಸ್ಮಾರ್ಟ್ ಸಿಟಿ ಕಾಮಗಾರಿ ಪ್ರತ್ಯೇಕ ಕಂಪೆನಿ ಮೂಲಕ ನಡೆಯುತ್ತಿದೆ. ನಿತ್ಯ ಪ್ರಗತಿ ಕಾಣುತ್ತಿದೆ. ಜುಲೈ ಅಂತ್ಯದೊಳಗೆ ಎಲ್ಲ ಕಾಮಗಾರಿ ಮುಗಿಯುವ ನಿರೀಕ್ಷೆ ಇದೆ. ಶಿವಾನಂದ ವೃತ್ತ, ಸ್ಟೀಲ್ ಬ್ರಿಡ್ಜ್ ಕಾಮಗಾರಿ ಕ್ಷಿಪ್ರವಾಗಿ ನಡೆಯುತ್ತಿದೆ ಎಂದು ಹೇಳಿದರು.
ಮೂರನೇ ಅಲೆ ಎದುರಿಸಲು ಕಂಟೈನ್ ಮೆಂಟ್ ಝೊನ್ ಹೆಚ್ಚಳಕ್ಕೆ ಮುಂದಾದ ಬಿಬಿಎಂಪಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.