News Kannada
Monday, March 27 2023

ಬೆಂಗಳೂರು

ಬೆಂಗಳೂರಿನಲ್ಲಿ ಆಭರಣ ಪಾರ್ಕ್‌: ಪ್ರಸ್ತಾವ ಸಲ್ಲಿಸಲು ಸಿಎಂ ಸೂಚನೆ

Photo Credit :

ಬೆಂಗಳೂರು: ಉದ್ಯೋಗ ಸೃಷ್ಟಿಮಾಡುವ ದೃಷ್ಟಿಯಿಂದ ಬೆಂಗಳೂರಿನಲ್ಲಿ ಅತ್ಯಾಧುನಿಕ ಸೌಲಭ್ಯ ಇರುವ ಆಭರಣ ಪಾರ್ಕ್‌ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಅರಮನೆ ಮೈದಾನದಲ್ಲಿ ಆರಂಭವಾಗಿರುವ ‘ಸೌತ್ ಇಂಡಿಯಾ ಜ್ಯುವೆಲ್ಲರಿ ಶೋ’ ಉದ್ಘಾಟಿಸಿ ಮಾತನಾಡಿದ ಅವರು, ‘ಕೌಶಲ ಬೇಡುವ ಆಭರಣ ಉದ್ದಿಮೆ ಕ್ಷೇತ್ರ ಉದ್ಯೋಗ ಸೃಜನೆಯ ದೃಷ್ಟಿಯಿಂದಲೂ ಮಹತ್ವದ್ದಾಗಿದೆ. ಆಭರಣ ಉತ್ಪಾದನೆಗೆ ಪೂರಕವಾಗಿ ಆಧುನಿಕ ತಂತ್ರಜ್ಞಾನವೂ ಅಗತ್ಯ. ಈ ಆಶಯದಡಿ ಪಾರ್ಕ್ ನಿರ್ಮಾಣ ಮಾಡಲು ಬೇಕಾದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿ’ ಎಂದು ಆಭರಣ ತಯಾರಕರ ಸಂಘಕ್ಕೆ ಸೂಚಿಸಿದರು.

ಭಾರತೀಯ ಶೈಲಿಯ ಆಭರಣಗಳ ವಹಿವಾಟು ಅಂತರರಾಷ್ಟ್ರೀಯ ಮಟ್ಟದಲ್ಲಿ ಪೈಪೋಟಿ ಮಾಡಬೇಕಾಗಿದೆ. ಚಿನ್ನ ನಿಯಂತ್ರಣ ಕಾಯ್ದೆ ತೆಗೆದುಹಾಕಿದ ನಂತರ ಮುಕ್ತ ವಾತಾವರಣ ನಿರ್ಮಾಣವಾಗಿದೆ. ಚಿನ್ನದ ವ್ಯಾಪಾರ ಉದ್ದಿಮೆಯಾಗಿ ಬೆಳೆದಿದೆ ಎಂದೂ ಅವರು ಹೇಳಿದರು.

See also  ಮಂಗಳವಾರ ಸಂಜೆ 7 ಘಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು