News Kannada
Sunday, April 02 2023

ಬೆಂಗಳೂರು

ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಗಸ್ತು ಹೆಚ್ಚಳ: ಆರಗ ಜ್ಞಾನೇಂದ್ರ

Photo Credit :

ಬೆಂಗಳೂರು: ಮೈಸೂರಿನ ಚಾಮುಂಡಿಬೆಟ್ಟದ ಬೆಟ್ಟದ ತಪ್ಪಲಿನಲ್ಲಿ ಸಂಜೆ 7 ಗಂಟೆಯ ಬಳಿಕ ಹೆಚ್ಚಿನ ಭದ್ರತೆ ಒದಗಿಸಲಾಗುವುದು. ಜನರಿಗೆ ತೊಂದರೆ ಆಗದಂತೆ ವ್ಯವಸ್ಥೆ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಅದರಲ್ಲೂ ತಮಿಳುನಾಡು, ಕೇರಳ ರಾಜ್ಯದಿಂದ ಬರುವವರ ಸಂಖ್ಯೆ ಜಾಸ್ತಿ ಇದೆ. ಗಡಿಭಾಗದಿಂದ ಬರುವವರು, ಹೋಗುವವರನ್ನು ತಡೆಯಲು ಸಾಧ್ಯವಿಲ್ಲ’ ಎಂದರು.

‘ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಗುಡ್ಡದಲ್ಲಿ ನಡೆದ ಅತ್ಯಾಚಾರ ಪ್ರಕರಣ ಅಮಾನವೀಯ ಕೃತ್ಯ. ಈ ಕೃತ್ಯದ ಬಳಿಕ ಸಾಕಷ್ಟು ಆತಂಕ ವ್ಯಕ್ತವಾಗಿತ್ತು. ಲಭ್ಯ ತಾಂತ್ರಿಕ ಸಾಕ್ಷ್ಯಗಳ ಆಧಾರದಲ್ಲಿ ಆರೋಪಿಗಳನ್ನು ಬಂಧಿಸುವ ಮೂಲಕ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂಬ ಸಂದೇಶವನ್ನು ಪೊಲೀಸರು ಕೊಟ್ಟಿದ್ದಾರೆ’ ಎಂದರು.

‘ಸಂತ್ರಸ್ತೆ ಇನ್ನೂ ಆಘಾತದಲ್ಲಿ ಇದ್ದಾರೆ. ಹೀಗಾಗಿ, ಆಕೆಯಿಂದ ಹೇಳಿಕೆ ಪಡೆಯಲು ಸಾಧ್ಯವಾಗಿಲ್ಲ. ಸಂತ್ರಸ್ತೆಯ ಹೇಳಿಕೆ ಪಡೆಯುವ ಸಂಬಂಧ ಆಕೆಯ ಕುಟುಂಬದ ಸದಸ್ಯರನ್ನು ಮನವೊಲಿಸಲಾಗುತ್ತಿದೆ’ ಎಂದರು.

See also  ನಗರದ ಕರ್ನಾಟಕ ಪೋಲೀಸ್‌ ಅಕಾಡೆಮಿಗೆ ಭೇಟಿ ನೀಡಿದ ಸಚಿವ ಆರಗ ಜ್ಞಾನೇಂದ್ರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು