News Kannada
Friday, March 31 2023

ಬೆಂಗಳೂರು

ತಜ್ಞರ ಸಭೆ ಬಳಿಕ ಹೊಸ ಮಾರ್ಗಸೂಚಿ ಸಿದ್ಧ ಪಡಿಸಲಾಗುತ್ತದೆ : ಸಿಎಂ ಬೊಮ್ಮಾಯಿ

Photo Credit :

ನವದೆಹಲಿ: ತಜ್ಞರೊಂದಿಗೆ ಇಂದು ಮಧ್ಯಾಹ್ನ 1 ಗಂಟೆಗೆ ಸಭೆ ನಡೆಸಲಿದ್ದು, ಸಭೆ ಬಳಿಕ ಹೊಸ ಮಾರ್ಗಸೂಚಿಯನ್ನು ಸಿದ್ಧ ಪಡಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಂಕಿತರ ವೈದ್ಯಕೀಯ ವರದಿ ಇಂದು ಸರ್ಕಾರದ ಕೈ ಸೇರಲಿದ್ದು, ವರದಿ ಬಳಿಕ ಸೋಂಕಿತರ ಸಂಪರ್ಕಿತರ ಪತ್ತೆ ಹಚ್ಚುವ ಕಾರ್ಯ ಆರಂಭಿಸಲಾಗುತ್ತದೆ.

ಈಗಾಗಲೇ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ಮಾತುಕತೆ ನಡೆಸಲಾಗಿದ್ದು, ಸಚಿವರು ವೈದ್ಯಕೀಯ ವರದಿ ಹಾಗೂ ಹೊಸ ಮಾರ್ಗಸೂಚಿಗಳೊಂದಿಗೆ ತಮ್ಮ ಬಳಿ ಬರುವಂತೆ ಹೇಳಿದ್ದಾರೆಂದು ತಿಳಿಸಿದ್ದಾರೆ. ಇಂದು ಮಧ್ಯಾಹ್ನ ಆರೋಗ್ಯ ಸಚಿವರು ಹಾಗೂ ತಜ್ಞರೊಂದಿಗೆ ತುರ್ತು ಸಭೆ ಕರೆಯಲಾಗಿದೆ ಎಂದಿದ್ದಾರೆ.

ಈಗಾಗಲೇ ರಾಜ್ಯದ ಆರೋಗ್ಯ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ವೈದ್ಯಕೀಯ ವರದಿ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.ಓಮಿಕ್ರಾನ್ ಅತಿ ವೇಗವಾಗಿ ಹರಡುವ ಮಾದರಿ ಎಂದು ವಿಶ್ವಸಂಸ್ಥೆ ಈಗಾಗಲೇ ಹೇಳಿದೆ. ಈ ರೂಪಾಂತರಿಯ ಸ್ಟೈಕ್ ಪ್ರೊಟೀನ್ ಗಳು 30ಕ್ಕೂ ಹೆಚ್ಚು ಬಾರಿ ರೂಪಾಂತರಗೊಂಡಿವೆ. ಹೀಗಾಗಿ ಲಸಿಕೆಯ ಪರಿಣಾಮವನ್ನೂ ಕುಗ್ಗಿಸಿ ಸೋಂಕು ಉಂಟು ಮಾಡಬಲ್ಲದು ಎಂಬುದು ಈ ವೈರಾಣು ಬಗೆಗಿನ ಆತಂಕಕ್ಕೆ ಮುಖ್ಯ ಕಾರಣವಾಗಿದೆ.

ಈ ವೈರಾಣು ರೂಪಾಂತರಿ ಡೆಲ್ಟಾಗಿಂದ ದುಪ್ಪಟ್ಟು ವೇಗವಾಗಿ ಹರಡುತ್ತದೆ ಎಂದು ವಿಶ್ವಸಂಸ್ಥೆ ಹೇಳಿದ್ದರೂ ಡೆಲ್ಟಾಗಿಂತ ಹೆಚ್ಚು ತೀವ್ರತೆ ಹಾಗೂ ಹರಡುವಿಕೆ ಇದಯೇ ಎಂಬುದು ಇನ್ನೂ ದೃಢಪಟ್ಟಿಲ್ಲ.

ಈ ವರೆಗೆ ವರದಿಯಾಗಿರುವ ಪ್ರಕರಣಗಳ ಪ್ರಕಾರ ಓಮಿಕ್ರಾನ್ ಸೋಂಕಿತರಲ್ಲಿ ಒಣಕೆಮ್ಮು, ಜ್ವರ, ರಾತ್ರಿ ವೇಳೆ ಬೆವರು, ತೀವ್ರ ಮೈ-ಕೈ ನೋವು, ಆಯಾಸ ಸಾಮಾನ್ಯ ರೋಗ ಲಕ್ಷಣಗಳಾಗಿವೆ.

See also  ಉಕ್ರೇನ್‌ನಿಂದ ವಾಪಸ್ ಆದ ವಿದ್ಯಾರ್ಥಿನಿಯನ್ನು ಸ್ವಾಗತಿಸಿದ ಸಿಎಂ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು