News Kannada
Wednesday, March 29 2023

ಬೆಂಗಳೂರು

ಎಸ್ಸೆಸ್ಸೆಲ್ಸಿ: ರಾಜ್ಯದಲ್ಲಿ ಈ ಬಾರಿ ಬಹು ಆಯ್ಕೆ ಪ್ರಶ್ನೆ ಇಲ್ಲ

k set exam
Photo Credit :

ಬೆಂಗಳೂರು: ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಡಲು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದೆ.ಶಿಕ್ಷಕರು ಮತ್ತು ತಜ್ಞರ ಅಭಿಪ್ರಾಯಗಳನ್ನು ಪಡೆದು ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಡಲಾಗಿದೆ. ಕೋವಿಡ್‌-19 ಕಾರಣಕ್ಕೆ 2021ನೇ ಸಾಲಿನ ಪರೀಕ್ಷೆಯಲ್ಲಿ ಈ ವ್ಯವಸ್ಥೆ ಜಾರಿಗೊಳಿಸಲಾಗಿತ್ತು.

ವಿದ್ಯಾರ್ಥಿಗಳ ಹಿತಾಸಕ್ತಿಯಿಂದಲೇ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿವರವಾಗಿ ಉತ್ತರ ಬರೆಯುವ ಪದ್ಧತಿಯಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ’ ಎಂದು ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಪ್ರಥಮ ಭಾಷೆ ಹೊರತುಪಡಿಸಿ ಉಳಿದ ವಿಷಯಗಳಿಗೆ 100 ಅಂಕಗಳನ್ನು ನಿಗದಿಪಡಿಸಲಾಗಿದೆ. ಇದರಲ್ಲಿ 20 ಅಂಕಗಳಿಗೆ ಆಂತರಿಕ ಪರೀಕ್ಷೆ ನಡೆಸಲಾಗುತ್ತದೆ. ಪ್ರಥಮ ಭಾಷೆಗೆ ಮಾತ್ರ 125 ಅಂಕಗಳನ್ನು ನಿಗದಿಪಡಿಸಲಾಗಿದೆ.

‘ಮಕ್ಕಳಲ್ಲಿ ಬರವಣಿಗೆ ಕೌಶಲ ಮತ್ತು ಜ್ಞಾನಮಟ್ಟ ಬೆಳೆಯುವುದು ಮುಖ್ಯ. ಬಹು ಆಯ್ಕೆ ಪ್ರಶ್ನೆಗಳಿಂದ ವಿದ್ಯಾರ್ಥಿಗಳು ಬರೆಯುವುದನ್ನು ಮರೆಯುತ್ತಾರೆ. ವಿದ್ಯಾರ್ಥಿಗಳು ವಿಷಯದ ವಿಶ್ಲೇಷಣೆ ನಡೆಸಿ ಬರೆಯುವುದು ಮುಖ್ಯವಾಗಬೇಕು’ ಎಂದು ಕರ್ನಾಟಕ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಚ್‌.ಕೆ. ಮಂಜುನಾಥ್‌ ಅಭಿಪ್ರಾಯಪಟ್ಟಿದ್ದಾರೆ.

See also  ಶಾಲಾ ಶುಲ್ಕ ಬಾಕಿ ಕಾರಣಕ್ಕೆ ಹಾಲ್ ಟಿಕೆಟ್ ನಿರಾಕರಿಸುವಂತಿಲ್ಲ:ಸಚಿವ ಬಿ.ಸಿ. ನಾಗೇಶ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 2 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು