News Kannada
Saturday, April 01 2023

ಬೆಂಗಳೂರು

ಬೆಂಗಳೂರು: ಧಾರಾಕಾರ ಮಳೆ, ಮೂವರ ದುರ್ಮರಣ

first-rain-of-the-year-for-mangalore-annual-rain-in-udupi-too
Photo Credit :

ಬೆಂಗಳೂರು: ಕಳೆದ 48 ಗಂಟೆಗಳಲ್ಲಿ ಕರ್ನಾಟಕದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಜೂನ್ 22 ರವರೆಗೆ ರಾಜ್ಯದಾದ್ಯಂತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ ಕೊಡಗು, ತುಮಕೂರು, ಮಂಡ್ಯ, ಶಿವಮೊಗ್ಗ, ದಾವಣಗೆರೆ ಚಿತ್ರದುರ್ಗದಲ್ಲಿ ಭಾನುವಾರದಿಂದ ಜೂನ್ 22 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಏತನ್ಮಧ್ಯೆ, ಐಎಂಡಿ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಬೆಂಗಳೂರು ನಗರದ ಬಹುತೇಕ ಭಾಗಗಳಲ್ಲಿ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗಿದ್ದು, ಉತ್ತರ ಮತ್ತು ಈಶಾನ್ಯ ಭಾಗಗಳಲ್ಲಿ ಶನಿವಾರ ರಾತ್ರಿ ಭಾರಿ ಮಳೆಯಾಗಿದ್ದು, ನೂರಾರು ವಾಹನಗಳು ಜಖಂಗೊಂಡಿವೆ.

ಅನೇಕ ವಸತಿ ಪ್ರದೇಶಗಳು ಪ್ರವಾಹದ ನೀರಿನಿಂದ ಮುಳುಗಿವೆ.

ಕೆ.ಆರ್.ಪುರಂ ಪ್ರದೇಶದಲ್ಲಿ ಸಿವಿಲ್ ಎಂಜಿನಿಯರ್ ಮಿಥುನ್ ಕುಮಾರ್ (24) ಎಂಬಾತ ಕಾಂಪೌಂಡ್ ಗೋಡೆಯ ಕೆಳಗೆ ಸಿಲುಕಿದ್ದ ತನ್ನ ಬೈಕನ್ನು ಎಳೆಯಲು ಪ್ರಯತ್ನಿಸುತ್ತಿದ್ದಾಗ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.

ಶನಿವಾರ ನಾಲ್ಕು ತಂಡಗಳು ನಡೆಸಿದ ವ್ಯಾಪಕ ಶೋಧದ ನಂತರ ಅವರ ದೇಹವನ್ನು ಹೊರತೆಗೆಯಲಾಗಿದೆ.

ಮಹದೇವಪುರದಲ್ಲಿ ಗೋಡೆ ಕುಸಿದು ವಿ.ಮುನಿಯಮ್ಮ ಎಂಬ ವೃದ್ಧೆ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಿಂದ 50 ಕಿ.ಮೀ ದೂರದಲ್ಲಿರುವ ಮಾಗಡಿ ಪಟ್ಟಣದ ಕೆರೆಗೆ ಕಾರು ಉರುಳಿದ ಪರಿಣಾಮ ವಿದ್ಯಾರ್ಥಿ ಪ್ರಜ್ವಲ್ ಸಾವನ್ನಪ್ಪಿದ್ದಾರೆ.

See also  ವಾಟ್ಸ್ ಆ್ಯಪ್: ಸಿಲಿಂಡರ್ ಕಾಯ್ದಿರಿಸಲು ಅವಕಾಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು