News Kannada
Thursday, March 30 2023

ಬೆಂಗಳೂರು

ಬೆಂಗಳೂರು: ಅಧಿಕಾರಿಗಳ ಕಿತ್ತಾಟ, ಕಾನೂನು ಕ್ರಮದ ಎಚ್ಚರಿಕೆ ನೀಡಿದ ಗೃಹಸಚಿವ ಆರಗ

IAS-IPS fight: K'taka Home Minister warns of legal action
Photo Credit : IANS

ಬೆಂಗಳೂರು: ಕರ್ನಾಟಕದಲ್ಲಿ ಇಬ್ಬರು ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ನಡುವಿನ ಮಾತಿನ ಯುದ್ಧ ಭಾರೀ ತಿರುವು ಪಡೆದುಕೊಂಡಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಆಯುಕ್ತರಾಗಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಕರಕುಶಲ ಅಭಿವೃದ್ಧಿ ನಿಗಮದಲ್ಲಿ ಐಜಿಪಿ, ಎಂಡಿಯಾಗಿ ಕಾರ್ಯನಿರ್ವಹಿಸುತ್ತಿರುವ ಐಪಿಎಸ್ ಅಧಿಕಾರಿ ಡಿ.ರೂಪ ಮೌದ್ಗಿಲ್ ಅವರು ಇತ್ತೀಚೆಗೆ ಪರಸ್ಪರ ಸಮಾಜಿಕ ಜಾಲತಾಣದಲ್ಲಿ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿದ್ದರು.\

“ಸರ್ಕಾರವು ಈ ಬೆಳವಣಿಗೆಗಳತ್ತ ಗಮನಹರಿಸಿದೆ. ಸಾರ್ವಜನಿಕ ಜೀವನದಲ್ಲಿ ಇಂತಹ ನಡವಳಿಕೆ ಅಪರಾಧವಾಗಿದೆ. ಖಾಸಗಿ ವಿಷಯಗಳನ್ನು ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಸಲಾಗುತ್ತಿದೆ. ಇದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಇಬ್ಬರೂ ಅಧಿಕಾರಿಗಳ ವರ್ತನೆ ನೋಡಿದರೆ ಬೆಚ್ಚಿ ಬೀಳುತ್ತದೆ. ಅವರ ವರ್ತನೆಯಿಂದ ಒಳ್ಳೆಯ ಅಧಿಕಾರಿಗಳಿಗೆ ಅವಮಾನವಾಗುತ್ತಿದೆ. ಮಾನವೀಯ ಭಾವನೆ ಇಲ್ಲದವರೂ ಇಂತಹ ಕೃತ್ಯಗಳಲ್ಲಿ ತೊಡಗಬಹುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಡಿಜಿ ಅವರೊಂದಿಗೆ ಮಾತನಾಡಿದ್ದು, ನಿಯಮಾನುಸಾರ ಕ್ರಮ ಕೈಗೊಳ್ಳುತ್ತೇವೆ,’’ ಎಂದು ಹೇಳಿದರು.

ಮೌದ್ಗಿಲ್ ಅವರು ಸಿಂಧೂರಿ ಅವರ ವೈಯಕ್ತಿಕ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ. ರೋಹಿಣಿ ಅವರು ಅಕ್ಷೇಪಾರ್ಹ ಚಿತ್ರಗಳನ್ನು ಕೆಲವು ಹಿರಿಯ ಐಎಎಸ್ ಅಧಿಕಾರಿಗಳಿಗೆ ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮೌದ್ಗಿಲ್ ಅವರು ಮತ್ತೊಂದು ಚಿತ್ರವನ್ನು ಪೋಸ್ಟ್ ಮಾಡಿದ್ದು, ಜೆಡಿಎಸ್‌ ಶಾಸಕ ಎಸ್.ಆರ್. ಮಹೇಶ್ ಅವರೊಂದಿಗೆ ಸಭೆ ನಡೆಸುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ. ಸಾರಾ ಅವರು ರೋಹಿಣಿ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದರು. ಈ ನಿಟ್ಟಿನಲ್ಲಿ ಸಂಧಾನ ಸಭೆಯೇ ಎಂದು ಪ್ರಶ್ನಿಸಿದ್ದಾರೆ.

ಈ ಬಗವ್ಗೆ ಪ್ರತಿಕ್ರಿಯಿಸಿರುವ ಸಿಂಧೂರಿ, ತನ್ನ ವಿರುದ್ಧ ಆಧಾರರಹಿತ ಆರೋಪ ಮಾಡಿದ್ದಕ್ಕಾಗಿ ಮೌದ್ಗಿಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದು, ಚಿತ್ರಗಳನ್ನು ಕಳುಹಿಸಿರುವ ಐಎಎಸ್ ಅಧಿಕಾರಿಗಳ ಹೆಸರುಗಳನ್ನು ಬಹಿರಂಗಪಡಿಸುವಂತೆ ಸವಾಲು ಹಾಕಿದ್ದಾರೆ. ಇಬ್ಬರು ಅಧಿಕಾರಿಗಳ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿಸಿ ಬಿಸಿ ಚರ್ಚೆಯಲ್ಲಿ ತೊಡಗಿದ್ದಾರೆ.

See also  ಕಾಂಗ್ರೆಸ್ ಗೆ ತಿರುಗೇಟು ನೀಡಿದ ಸಚಿವ ಅಶ್ವಥ್ ನಾರಾಯಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು