News Kannada
Tuesday, June 06 2023
ಬೆಂಗಳೂರು

ಬೆಂಗಳೂರು: ಎಲೆಕ್ಷನ್ ಮುಗಿವವರೆಗೆ ‘ಸಂತೋಷ’ ಆಟವಿಲ್ಲ? ಬಿಜೆಪಿ ಕಾಲೆಳೆದ ಕಾಂಗ್ರೆಸ್‌

You were targeted because of religion: Hand leader's tweet against Shah Rukh Khan
Photo Credit : Facebook

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ಬಿ.ವೈ. ವಿಜಯೇಂದ್ರ ಅವರೊಂದಿಗೆ ನಡೆದುಕೊಂಡ ರೀತಿ, ಆಪ್ತತೆ ಬಗ್ಗೆ ವಿಡಿಯೋ, ಫೋಟೋಗಳು ಸಾಕಷ್ಟು ಹರಿದಾಡುತ್ತಿವೆ.

ಈ ಕುರಿತು ಸಿಟಿ ರವಿ ನೀಡಿದ್ದ ಕಿಚನ್‌ ಕ್ಯಾಬಿನೇಟ್‌ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್‌ ಬಿಜೆಪಿಯ ಕಾಲೆಳೆದಿದೆ. ನಮ್ಮ ಪಕ್ಷದ ಟಿಕೆಟ್ ಕಿಚನ್ನಲ್ಲಿ ತೀರ್ಮಾನ ಆಗಲ್ಲ ಅಂದಿದ್ರಲ್ಲ ಮಾನ್ಯ @CTRavi_BJP ಅವರೇ ಇದೇನಿದು ನಿಮ್ಮ ಹೇಳಿಕೆಗೆ ವಿರುದ್ಧವಾಗಿ ಆಗ್ತಾ ಇದೆಯಲ್ಲ. ವಿಜಯೇಂದ್ರ ಅವರಿಗೆ ಟಿಕೆಟ್ ಫಿಕ್ಸ್ ಆಯ್ತಾ? ಯಡಿಯೂರಪ್ಪ ಮತ್ತು ಸಂತೋಷ್ ನಡುವಣ ಮೇಲಾಟದಲ್ಲಿ ಯಾರ ಕೈ ಮೇಲಾಯ್ತು? ಎಲೆಕ್ಷನ್ ಮುಗಿವವರೆಗೆ ‘ಸಂತೋಷ’ ಆಟ ನಡೆಯುವುದಿಲ್ಲ ಅಲ್ಲವೇ? ಎಂದು ಪ್ರಶ್ನೆ ಮಾಡಿದೆ.

ಶಿಕಾರಿಪುರದಲ್ಲಿ ವಿಜಯೇಂದ್ರ ಸ್ಪರ್ಧೆಗೆ ಸಂಬಂಧಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಸಿ.ಟಿ ರವಿ, ಟಿಕೇಟ್‌ ನೀಡುವ ಬಗ್ಗೆ ಕುಟುಂಬದಲ್ಲಿ ತೀರ್ಮಾನ ನಡೆಯುವುದಿಲ್ಲ. ಸಂಸದೀಯ ಮಂಡಳಿಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಪಕ್ಷದಲ್ಲಿ ಕಿಚನ್‌ನಲ್ಲಿ ತೀರ್ಮಾನ ತೆಗೆದುಕೊಳ್ಳುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದರು. ಅಲ್ಲದೆ ಮುಂದುವರೆದು ನಾಯಕರ ಮಕ್ಕಳೆಂದ ಕಾರಣಕ್ಕೆ ಅವರಿಗೆ ಟಿಕೇಟ್‌ ಸಿಕ್ಕಲ್ಲ ಈಗ ವಿಜಯೇಂದ್ರ ಬಗ್ಗೆ ಕೇಳಿದ್ದೀರಿ ಅವರಿಗೆ ಟಿಕೇಟ್‌ ನೀಡುವ ನಿರ್ಧಾರವನ್ನು ಸಂಸದೀಯ ಮಂಡಳಿ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದರು.

See also  ರಾಜ್ಯಾದ್ಯಂತ ಮಧ್ಯಾಹ್ನದ ಬಿಸಿಯೂಟದ ಜೊತೆ ಮಕ್ಕಳಿಗೆ ಮೊಟ್ಟೆ ವಿತರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು