News Kannada
Tuesday, October 03 2023
ಬೆಂಗಳೂರು

ಗೋಹತ್ಯೆ ನಿಷೇಧ ಕಾಯ್ದೆ ವಾಪಸ್‌ ಪಡೆಯುವ ಸಾಧ್ಯತೆ: ಸಚಿವರು ಏನು ಹೇಳಿದ್ರು ಗೊತ್ತಾ

Anti-cow slaughter law likely to be withdrawn: Here's what the minister said
Photo Credit : News Kannada

ಬೆಂಗಳೂರು: ಕರ್ನಾಟಕದಲ್ಲಿ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಕಾಯ್ದೆಯು ಸಿದ್ದು ಸರಕಾರ ಬಂದಿರುವ ಬೆನ್ನಲ್ಲೇ ಹಿಂದಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಸ್ವತಃ ಈ ಬಗ್ಗೆ ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು ‘ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂದಕ್ಕೆ ತೆಗೆದುಕೊಳ್ಳಬೇಕೋ ಅಥವಾ ಬೇಡವಾ? ಅನ್ನುವುದರ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಎಮ್ಮೆ , ಕೋಣೆಗಳನ್ನು ಕಡಿಯುವುದಾದ್ರೆ ಹಸುಗಳನ್ನು ಏಕೆ ಕಡಿಯಬಾರದು? ನನ್ನ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಈ ಪೈಕಿ ಒಂದು ಹಸು ಸತ್ತಾಗ ಗುಂಡಿ ತೆಗೆದು ಮುಚ್ಚಲು ಬಹಳ ಕಷ್ಟವಾಯಿತು. ೨೫ ಮಂದಿ ಬಂದ್ರೂ ಹಸುವನ್ನು ಎತ್ತಲೂ ಆಗಿರಲಿಲ್ಲ. ಕೊನೆಗೆ ಜೆಸಿಬಿ ತರಿಸಿ ಮಣ್ಣು ಮಾಡಬೇಕಾಯಿತು. ಎಲ್ಲವನ್ನೂ ಗಮನಿಸಿಕೊಂಡು ಸರಕಾರ ಕ್ರಮ ತೆಗೆದುಕೊಳ್ಳುತ್ತದೆ’ ಎಂದು ಸಚಿವ ವೆಂಕಟೇಶ್ ತಿಳಿಸಿದರು. ೨೦೨೧ರಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದ್ದನ್ನು ಸ್ಮರಿಸಬಹುದು.

See also  ಚಾಮರಾಜನಗರ: ಯಳಂದೂರಿನಲ್ಲಿ ಮತದಾನದ ಅರಿವು ಜಾಥಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು