News Kannada
Thursday, March 30 2023

ಬೆಂಗಳೂರು ಗ್ರಾಮಾಂತರ

ಮತದಾನ ಜಾಗೃತಿ ಚಟುವಟಿಕೆ ಚುರುಕುಗೊಳಿಸಿ: ಜಿಲ್ಲಾಧಿಕಾರಿ ಆರ್.ಲತಾ

Increase voter awareness activities: Deputy Commissioner R Latha
Photo Credit : By Author

ಬೆಂಗಳೂರು ಗ್ರಾಮಾಂತರ: ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು. ಸಾರ್ವಜನಿಕ ಮತದಾರರಿಗೆ ಮತಚಲಾವಣೆಯ ಕುರಿತ ಮಾಹಿತಿ ನೀಡಲು ಎಲ್ಲಾ ಮತಗಟ್ಟೆಗಳಲ್ಲಿ ಇವಿಎಂ ಪ್ರಾತ್ಯಕ್ಷಿಕೆ ನಡೆಸಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲೆಯ ನೋಡಲ್ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಏರ್ಪಡಿಸಿದ್ದ ಇವಿಎಂ ಹಾಗೂ ವಿವಿಪ್ಯಾಟ್ ಬಳಕೆ ಕುರಿತ ತರಬೇತಿ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಜಿಲ್ಲೆಯಲ್ಲಿ 65 ಇವಿಎಂ ಯಂತ್ರಗಳನ್ನು ಪ್ರಾತ್ಯಕ್ಷಿಕೆಗೆ ಮೀಸಲಿಡಲಾಗಿದೆ. ಜಿಲ್ಲೆಯಾದ್ಯಂತ ಎಲ್ಲಾ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮತದಾರರ ಬಳಿ ಅವುಗಳನ್ನು ಆಯೋಗದ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಸುರಕ್ಷಿತವಾಗಿ ತೆಗೆದುಕೊಂಡು ಹೋಗಿ, ಮಾಹಿತಿ ನೀಡಬೇಕು. ತರಬೇತಿ ನೀಡುವ ಅಧಿಕಾರಿ, ಸಿಬ್ಬಂದಿ ಸರಿಯಾದ ಮಾಹಿತಿಯೊಂದಿಗೆ ಜನರ ಬಳಿಗೆ ಹೋಗಬೇಕು. ಇವಿಎಂ ಹಾಗೂ ವಿವಿಪ್ಯಾಟ್ ಮತಯಂತ್ರಗಳ ಕಾರ್ಯವಿಧಾನ, ಚಲಾವಣೆಗೊಂಡ ಮತದ ಕುರಿತು ವಿವಿಪ್ಯಾಟ್ ಯಂತ್ರದಲ್ಲಿ ಖಚಿತಪಡಿಸಿಕೊಳ್ಳುವ ವಿಧಾನಗಳು ಮತ್ತಿತರ ಮಾಹಿತಿಗಳನ್ನು ಪ್ರಾತ್ಯಕ್ಷಿಕೆ ಮೂಲಕ ನೀಡಬೇಕು. ಸ್ವೀಪ್ ಚಟುವಟಿಕೆಗಳನ್ನು ವಿಭಿನ್ನವಾಗಿ ಕೈಗೊಂಡು ಮತದಾನದ ಮಹತ್ವ ಮನವರಿಕೆ ಮಾಡಿಕೊಡಬೇಕು ಎಂದರು.

ಜಿಪಂ ಉಪಕಾರ್ಯದರ್ಶಿ ಡಾ.ನಾಗರಾಜ ಮಾತನಾಡಿ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಜಂಟಿಯಾಗಿ ಜಿಲ್ಲೆಯಾದ್ಯಂತ ಇವಿಎಂ ಹಾಗೂ ವಿವಿಪ್ಯಾಟ್‌ಗಳ ಬಳಕೆ ಕುರಿತು ಜಾಗೃತಿ ಮೂಡಿಸಬೇಕು ಎಂದರು.

ಉಪವಿಭಾಗಾಧಿಕಾರಿ ತೇಜಸ್ ಕುಮಾರ ಮಾತನಾಡಿ, ಜಿಲ್ಲೆಯಾದ್ಯಂತ ಒಟ್ಟು 1337 ಮತಗಟ್ಟೆಗಳು ಸ್ಥಾಪನೆಯಾಗಲಿವೆ. ಭಾರತ ಚುನಾವಣಾ ಆಯೋಗವು ಮತದಾರರಲ್ಲಿ ವ್ಯಾಪಕ ಅರಿವು ಮೂಡಿಸಿ ಮತದಾನದ ಪ್ರಮಾಣ ಹೆಚ್ಚಿಸಲು ಸೂಚಿಸಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಅಧಿಕಾರಿಗಳು, ಸಿಬ್ಬಂದಿ ಜನರ ಬಳಿಗೆ ತೆರಳಿ ಇವಿಎಂ, ವಿವಿಪ್ಯಾಟ್ ಬಳಕೆಗಳ ಕುರಿತು ಸಮರ್ಪಕ ಮಾಹಿತಿ ನೀಡಬೇಕು ಎಂದರು.

ಭೂದಾಖಲೆಗಳ ಉಪನಿರ್ದೇಶಕ ಹನುಮೇಗೌಡ ಮಾತನಾಡಿ,ಜನರಲ್ಲಿ ಇವಿಎಂ,ವಿವಿಪ್ಯಾಟ್ ಮತಯಂತ್ರಗಳ ಬಳಕೆ ಕುರಿತು ಆತ್ಮವಿಶ್ವಾಸ ಮೂಡಿಸಬೇಕು. ಆಯೋಗದ ನಿರ್ದೇಶನಗಳ ಅನುಸಾರವಾಗಿ ಈ ತಂತ್ರಗಳನ್ನು ತೆಗೆದುಕೊಂಡು ಹೋಗಿ, ಸುರಕ್ಷತೆಗೆ ಆದ್ಯತೆ ನೀಡಬೇಕು.ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಎಚ್ಚರವಹಿಸಬೇಕು ಎಂದರು.

ತಹಸೀಲ್ದಾರ ಶಿವರಾಜ,ರಾಜ್ಯ ಮಟ್ಟದ ತರಬೇತಿದಾರ ಅಮೀರ್‌ಪಾಷ, ಉಪ ಕೃಷಿ ನಿರ್ದೇಶಕಿ ವಿನುತಾ, ಮತ್ತಿತರರು ಉಪಸ್ಥಿತರಿದ್ದರು.

See also  ಬೆಂಗಳೂರು ಗ್ರಾಮಾಂತರ: ವೈಯಕ್ತಿಕ ಮಾಹಿತಿ ಸಂಗ್ರಹ ನಿರ್ಬಂಧಿಸಿ ಡಿಸಿ ಆದೇಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು