News Kannada
Monday, September 25 2023
ಬೆಂಗಳೂರು ನಗರ

ಒಳ್ಳೆಯ ಗುಣನಡತೆಯವರನ್ನು ಜನಪ್ರತಿನಿಧಿಗಳನ್ನಾಗಿ ಆಯ್ಕೆ ಮಾಡಿ: ವೆಂಕಯ್ಯ ನಾಯ್ಡು

Photo Credit :

ಒಳ್ಳೆಯ ಗುಣನಡತೆಯವರನ್ನು ಜನಪ್ರತಿನಿಧಿಗಳನ್ನಾಗಿ ಆಯ್ಕೆ ಮಾಡಿ: ವೆಂಕಯ್ಯ ನಾಯ್ಡು

ಬೆಂಗಳೂರು: ಒಳ್ಳೆಯ ಗುಣನಡತೆ, ಹಿನ್ನೆಲೆ ಇರುವವರನ್ನು ಜನಪ್ರತಿನಿಧಿಗಳಾಗಿ ಆಯ್ಕೆ ಮಾಡಿ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕರೆ ನೀಡಿದ್ದಾರೆ.

ಜನಪ್ರತಿನಿಧಿಗಳು ಒಳ್ಳೆಯ ಗುಣನಡತೆ ಇರಬೇಕು. ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿರಬಾರದು. ಆದರೆ ಇಂದಿನ ದಿನಗಳಲ್ಲಿ ಜಾತಿ, ಸಮುದಾಯ, ಹಣ ಮತ್ತು ಕ್ರಿಮಿನಲ್ ಹಿನ್ನೆಲೆ ಇರುವವರು ಜನಪ್ರತಿನಿಧಿಗಳಾಗುತ್ತಿದ್ದಾರೆ ಎಂದು ಸೆಂಟ್ರಲ್ ಕಾಲೇಜು ಸಂಭಾಗಣದಲ್ಲಿ ವಿ.ಪಿ.ದೀನದಯಾಳು ನಾಯ್ಡು ಜನ್ಮ ಶತಮಾನೋತ್ಸವ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ವೆಂಕಯ್ಯ ನಾಯ್ಡು ಅವರು ತಿಳಿಸಿದರು.

ಹವಾಮಾನ ಬದಲಾವಣೆ ಬಗ್ಗೆ ಪ್ರಸ್ತಾಪಿಸಿದ ವೆಂಕಯ್ಯ ನಾಯ್ಡು, ಪ್ರಕೃತಿಯ ಮೇಲೆ ದೌರ್ಜನ್ಯ ನಿಲ್ಲಬೇಕು. ಕೆರೆ, ನದಿ, ರಸ್ತೆ ಯಾವುದನ್ನೂ ಬಿಡದೆ ಒತ್ತುವರಿ ಮಾಡಲಾಗುತ್ತಿದೆ. ಇದರಿಂದಾಗಿಯೇ ತಮಿಳುನಾಡು, ಕೇರಳ, ಕೊಡಗಿನಲ್ಲಿ ಪ್ರವಾಹದಿಂದ ಸಮಸ್ಯೆ ಉಂಟಾಯಿತು. ಮೋದಿಯವರು ಸ್ಮಾರ್ಟ್ ಸಿಟಿ ಘೋಷಣೆ ಮಾಡಿದ ತಕ್ಷಣ ಬೆಂಗಳೂರು ಸ್ಮಾರ್ಟ್ ಸಿಟಿ ಆಗಲ್ಲ. ಇದಕ್ಕೆ ಜನರ ಸಹಕಾರ ಅಗತ್ಯ. ಒತ್ತುವರಿ ನಿಲ್ಲಬೇಕು ಎಂದರು.

See also  ಬಿಜೆಪಿಗೆ ಸೇರ್ಪಡೆಯಾದ ಅಥ್ಲೀಟ್ ಅಂಜು ಬಾಬಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು