News Kannada
Wednesday, October 04 2023
ಬೆಂಗಳೂರು ನಗರ

ಕರೆ ಸ್ವೀಕರಿಸದ್ದಕ್ಕೆ ಶಾಸಕ ಸೋಮಶೇಖರ ರೆಡ್ಡಿ ಆಕ್ರೋಶ: ಸ್ಪಷ್ಟನೆ ನೀಡಿದ ಡಾ. ಕೆ ಸುಧಾಕರ್

Dr. Sudhakar
Photo Credit :

ಬೆಂಗಳೂರು ಫೆ. 03: ತಮ್ಮ ಕರೆ ಸ್ವೀಕರಿಸದ್ದಕ್ಕೆ ಶಾಸಕ ಸೋಮಶೇಖರ ರೆಡ್ಡಿ ಆಕ್ರೋಶಗೊಂಡ ಬೆನ್ನಲ್ಲೆ ಇಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ಸೋಮಶೇಖರ್ ರೆಡ್ಡಿ ಅವರು ಆರೋಗ್ಯ ಸರಿ ಇಲ್ಲದ ಸಮಯದಲ್ಲಿ ನನಗೆ ಕರೆ ಮಾಡಿದ್ದರು. ಅವರು ನನ್ನ ಆತ್ಮೀಯ ಸ್ನೇಹಿತರು ಎಂದು ಸುಧಾಕರ್ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಕೆ ಸುಧಾಕರ್, ‘ಸೋಮಶೇಖರ್ ರೆಡ್ಡಿ ನನಗೆ ಕರೆ ಮಾಡಿದ್ದರು. ಆಗ ನನಗೆ ಆರೋಗ್ಯ ಸರಿ ಇರಲಿಲ್ಲ. ಹೀಗಾಗಿ ನಾನು ಮಾತನಾಡಲಿಲ್ಲ. ಬಳಿಕ ನಾನು ಅವರೊಂದಿಗೆ ಮಾತನಾಡಿದ್ದೇನೆ. ಸದ್ಯ ಯಾವುದೇ ಸಮಸ್ಯೆ ಇಲ್ಲ. ಅವರು ನನ್ನ ಆಪ್ತ ಸ್ನೇಹಿತರು’ ಎಂದು ಅವರು ಹೇಳಿದ್ದಾರೆ.

ನಿನ್ನೆ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಡಾ. ಕೆ ಸುಧಾಕರ್ ಮೇಲೆ ಕರೆ ಸ್ವೀಕರಿಸಿದ ಆರೋಪವನ್ನು ಮಾಡಿದ್ದರು. ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಹಾಗೂ ಎಂಡಿ ಸೀಟ್​ಗಳ ಸಂಖ್ಯೆಯಲ್ಲಿ ಕಡಿತವಾಗಿದೆ ಎಂದು ಶಾಸಕ ಸೋಮಶೇಖರ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಚರ್ಚಿಸಲು ಆರೋಗ್ಯ ಸಚಿವ ಡಾ.ಕೆ.ಸುಧಾಕರ ಅವರಿಗೆ ಕರೆ ಮಾಡಿದ್ದೆ. ಅವರು ನನ್ನ ಕರೆ ಸ್ವೀಕರಿಸಲಿಲ್ಲ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇವಲ 30 ಸೆಕೆಂಡ್​ನಲ್ಲಿ ಕೆಲಸ ಮಾಡಿಕೊಟ್ಟರು. ಇವರೇನೂ ಸಿಎಂಗಿಂತ್ಲೂ ದೊಡ್ಡವರಾ? ಇವರ ವರ್ತನೆ ವಿರುದ್ಧ ಕ್ರಮಕೈಗೊಳ್ಳಬೇಕಿದೆ ಎಂದು ಅವರು ಆಗ್ರಹಿಸಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ, ನಮ್ಮ ಸಮಸ್ಯೆ ಹೇಳಿಕೊಂಡೆವು. ಅವರು ತಕ್ಷಣ ಸಮಸ್ಯೆಗೆ ಸ್ಪಂದಿಸಿದರು. ಸಚಿವ ಸುಧಾಕರ್ ಅವರ ವರ್ತನೆಯ ಬಗ್ಗೆ ನನಗೆ ಆಕ್ಷೇಪವಿದೆ. ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ನಮ್ಮ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಮನವಿ ಮಾಡುತ್ತೇನೆ ಎಂದರು.

ಇನ್ನೂ ನಾನು 15ಕ್ಕೂ ಹೆಚ್ಚು ದುರಹಂಕಾರಿ ಸಚಿವರ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ದೂರು ಕೊಟ್ಟಿರುವುದು ನಿಜ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು. ನಾನು ಲಿಖಿತ ರೂಪದಲ್ಲಿ ದೂರು ನೀಡಿಲ್ಲ. ಜ.27ರಂದು ಒಬ್ಬ ಸಚಿವರಿಗೆ ನಾನು ಕರೆ ಮಾಡಿದ್ದೆ, ಅವರು ನನ್ನ ಕರೆ ಸ್ವೀಕರಿಸಿರಲಿಲ್ಲ. ಅವರ ಆಪ್ತಸಹಾಯಕರು ಕರೆ ಸ್ವೀಕರಿಸಿ ಸಚಿವರಿಗೆ ಕೊರೊನಾ ಎಂದರು. ನಾನು ಸುಮ್ಮನಾಗಿದ್ದೆ. ಆದರೆ ಮರುದಿ‌ನ ಅವರು ಸಚಿವ ಸಂಪುಟ ಸಭೆಗೆ ಹಾಜರಾಗಿದ್ದರು. ಸಚಿವರು ಈ ರೀತಿಯಾಗಿ ಮಾಡಿರುವುದು ಸರಿಯಲ್ಲ. ನಾನು ಈ ದೂರವಾಣಿ ಕರೆಯ ಬಗ್ಗೆ ಸಹ ಮಾಹಿತಿ ನೀಡಿರುವೆ. ಈ ವಿಚಾರದ ಬಗ್ಗೆ ಬಿಜೆಪಿ ವರಿಷ್ಠರು ನಿರ್ಧರಿಸುತ್ತಾರೆ ಎಂದು ಅವರು ಹೇಳಿದರು.

See also  ಜನರ ಸಮಸ್ಯೆಗಳು ಪರಿಹಾರವಾಗಲು ಅಧಿಕಾರಿಗಳು ಜನರೊಂದಿಗೆ ಬೆರೆಯಿರಿ: ಕಿರಣ್‌ ಬೇಡಿ

ಹೊನ್ನಾಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕರ ಮನವಿಗೆ ಸ್ಪಂದಿಸದ ಹಾಗೂ ಕ್ಷೇತ್ರದ ಕೆಲಸ ಮಾಡಿಕೊಡದ ಕೆಲ ದುರಹಂಕಾರಿ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಕೆಲವು ಸಚಿವರು ತಮ್ಮಿಂದಲೇ ಸರ್ಕಾರ ಬಂದಿದೆ. ತಮ್ಮಿಂದಲೇ ಎಲ್ಲವೂ ನಡೆಯುತ್ತದೆ ಎಂಬ ಅಹಂನಲ್ಲಿದ್ದಾರೆ. ನಾನು ಎಲ್ಲ ಸಚಿವರ ಬಗ್ಗೆ ಟೀಕೆ ಮಾಡುವುದಿಲ್ಲ. ಕೆಲವು ಸಚಿವರು ನಮ್ಮ ಮನವಿಗೆ ಸ್ಪಂದಿಸಿ ನಮ್ಮನ್ನು ಗೌರವದಿಂದ ಕಾಣುತ್ತಾರೆ. ಕ್ಷೇತ್ರದ ಕೆಲಸಗಳನ್ನು ಮಾಡಿಕೊಡುತ್ತಾರೆ. ಅಂಥವರ ಬಗ್ಗೆ ನಮಗೆ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು