News Kannada
Wednesday, December 06 2023
ಬೆಂಗಳೂರು ನಗರ

ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಇಂದಿನಿಂದ ಬೆಂಗಳೂರು ಉತ್ಸವಕ್ಕೆ ಚಾಲನೆ

BLTNGDY 3
Photo Credit :

ಬೆಂಗಳೂರು: ರಾಜ್ಯದ ಹಾಗೂ ದೇಶದ ಕಲಾವಿದರುಗಳಿಗೆ ಸೂಕ್ತ ವೇದಿಕೆಯನ್ನು ಒದಗಿಸಿ ಪ್ರೋತ್ಸಾಹ ನೀಡುವಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್‌ ಯಾವಾಗಲೂ ಮುಂದಿರುತ್ತದೆ ಎಂದು ನಟಿ ಅಮಿತಾ ಸದಾಶಿವ ಹೇಳಿದರು.

ಇಂದು ಬೆಂಗಳೂರಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಆಯೋಜಿಸಲಾಗಿರುವ ಬೆಂಗಳೂರು ಉತ್ಸವ ಕರಕುಶಲ ವಸ್ತುಗಳ ಮಾರಾಟ ಮತ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕರಕುಶಲ ಮತ್ತು ಕಲಾಕೃತಿಗಳು ಎಂದರೆ ನೆನಪಾಗುವುದು ನಮಗೆ ಕರ್ನಾಟಕ ಚಿತ್ರಕಲಾ ಪರಿಷತ್‌. ಸಣ್ಣ ವಯಸ್ಸಿನಿಂದಲೂ ನಾನು ಈ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಕಲಾಕೃತಿಗಳನ್ನು ನೋಡಿ ಆನಂದಿಸಿದ್ದೇನೆ. ಚಿತ್ರಕಲಾ ಪರಿಷತ್ತು ದೇಶಕ್ಕೆ ಪ್ರಮುಖ ಕಲಾವಿದರುಗಳನ್ನು ನೀಡಿದ ಸಂಸ್ಥೆ. ಹಾಗೆಯೇ, ಕಲಾವಿದರುಗಳಿಗೆ ಸೂಕ್ತ ವೇದಿಕೆಯನ್ನು ಒದಗಿಸಿ ಪ್ರೋತ್ಸಾಹ ನೀಡುತ್ತಿದೆ ಎಂದು ಹೇಳಿದರು.

ಮೇಳದ ಆಯೋಜಕರಾದ ಅಫ್ತಾಬ್‌ ಮಾತನಾಡಿ, ಕರ್ನಾಟಕ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಬೆಳಿಗ್ಗೆ 11 ರಿಂದ ಸಂಜೆ ೭ ಗಂಟೆಯವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದ್ದು, ಪ್ರವೇಶ ಉಚಿತವಾಗಿದೆ.

80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್‌ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್‌ ಲೂಮ್‌ ಸ್ಯಾರಿಯನ್ನು ಸೆಲೆಕ್ಟ್‌ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ ಎಂದರು.

 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 96118 35597 

See also  ನಕಲಿ ಅಂಕಪಟ್ಟಿ ನೀಡುತ್ತಿದ್ದ ಜಾಲವನ್ನು ಭೇದಿಸಿದ ಪೊಲೀಸರು: ನಾಲ್ವರು ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು