News Kannada
Monday, September 25 2023
ಬೆಂಗಳೂರು ನಗರ

ಪೊಲೀಸ್ ಠಾಣೆಯ ಎದುರು ಅಸ್ಥಿಪಂಜರ ಪತ್ತೆ; ತನಿಖೆ ನಡೆಸಲು ಮುಂದಾದ ಪೊಲೀಸ್ ಸಿಬ್ಬಂದಿ

Photo Credit :

ಪೊಲೀಸ್ ಠಾಣೆಯ ಎದುರು ಅಸ್ಥಿಪಂಜರ ಪತ್ತೆ; ತನಿಖೆ ನಡೆಸಲು ಮುಂದಾದ ಪೊಲೀಸ್ ಸಿಬ್ಬಂದಿ

ಬೆಂಗಳೂರು : ಚರಂಡಿ ದುರಸ್ತಿ ವೇಳೆ ಮನುಷ್ಯನ ಅಸ್ಥಿಪಂಜರವೊಂದು ಪತ್ತೆಯಾದ ಘಟನೆ ನಗರದ ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಎದುರಿನಲ್ಲಿ ನಡೆದಿದೆ. ಸುಮಾರು ನಾಲ್ಕು ವರ್ಷ ಹಿಂದೆ ಸಂಭವಿಸಿದ ಘಟನೆ ಇದಾಗಿರಬಹುದು ಎಂದು ಶಂಕಿಸಲಾಗಿದೆ . ಈ ಅಸ್ತಿಪಂಜರದ ಕುರಿತಾದ ತನಿಖೆ ನಡೆಸಲಾಗುತ್ತಿದೆ ಎಂದು ವಿಜಯನಗರ ಠಾಣೆ ಪೊಲೀಸರು ತಿಳಿಸಿದ್ದಾರೆ .

ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯ ಮುಂದಿರುವ ಮುಚ್ಚಿದ ಮೋರಿಯಲ್ಲಿ ಕಸಗಳು ತುಂಬಿ ಚರಂಡಿ ನೀರು ಮುಂದೆ ಸಾಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದ್ದ ಹಿನ್ನೆಲೆಯಲ್ಲಿ, ಸೋಮವಾರ ಮಧ್ಯಾಹ್ನ ಬಿಬಿಎಂಪಿ ಸಿಬ್ಬಂದಿಗಳು ಮೂರಯ . ಹೀಗಾಗಿ ಸೋಮವಾರ ಮಧ್ಯಾಹ್ನ ಬಿಬಿಎಂಪಿ ಸಿಬ್ಬಂದಿ ಮೋರಿಯ ಕಲ್ಲನ್ನು ತೆಗೆದು ಚರಂಡಿ ಸ್ವಚ್ಛಗೊಳಿಸುತ್ತಿದ್ದರು . ಆ ವೇಳೆ ಶವದ ಅಸ್ಥಿಪಂಜರ ಪತ್ತೆಯಾಗಿದ್ದು, ಕೂಡಲೇ ಬಿಬಿಎಂಪಿ ಸಿಬ್ಬಂದಿ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದರು .

ಅಸ್ಥಿಪಂಜರವನ್ನು ವಶಕ್ಕೆ ಪಡೆಯಲಾಗಿದ್ದು , ಈ ಸ್ಥಳದಲ್ಲಿನ ಮಣ್ಣನ್ನು ಕೂಡ ಸಂಗ್ರಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ . ಎರಡು ವರ್ಷಕ್ಕೂ ಹಿಂದೆಯೇ ಶವವನ್ನು ಚರಂಡಿಯಲ್ಲಿ ಹಾಕಿರಬಹುದು ಎಂದು ಪ್ರಾಥಮಿಕ ತನಿಖೆ ನಡೆಸಿದ ಪೊಲೀಸರು ತಿಳಿಸಿದ್ದಾರೆ . ಅಷ್ಟೇ ಅಲ್ಲದೆ, 4 ವರ್ಷದಿಂದ ಇತ್ತೀಚಿನವರೆಗೂ ಕಾಣೆಯಾಗಿ ಪತ್ತೆಯಾಗದೆ ಇರುವ ಪ್ರಕರಣಗಳ ಕುರಿತು ತನಿಖೆ ನಡೆಸುತ್ತೇವೆ ಎಂದು ಡಿಸಿಪಿ ತಿಳಿಸಿದ್ದಾರೆ .

See also  ವಿದೇಶದಿಂದ ಬೆಂಗಳೂರಿಗೆ ಬಂದ 6 ಜನರಿಗೆ ಕೊರೋನಾ ಸೋಂಕು ದೃಢ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು