ಬೆಂಗಳೂರು: ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ನ 17 ಶಾಸಕರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗುವ ಮೂಲಕ ಬಿಜೆಪಿ ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ.
ಈ ವೇಳೆ ಶಾಸಕರಲ್ಲಿ ವಿಶ್ವಾಸ ತುಂಬುವ ಮಾತನಾಡಿದ ಸಿಎಂ. ಯಡಿಯೂರಪ್ಪ, ನಾಳೆಯ ಭಾವಿ ಶಾಸಕರು ಮತ್ತು ಭಾವಿ ಸಚಿವರಿಗೆ ಅಭಿನಂದನೆ ಎಂದರು. ಬುಧವಾರ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಬಳಿಕ ಇಂದು 17 ಮಾಜಿ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡರು.
ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇದ್ದರು.