News Karnataka Kannada
Thursday, April 25 2024
ಬೆಂಗಳೂರು ನಗರ

ಅನಿರೀಕ್ಷಿತ ಮಳೆ ಹಾನಿ ಪರಿಹಾರದ ಬಗ್ಗೆ ಸಿಎಂ ಮಾತು

Basavaraj Bommaih V Ponnuraj 01082021
Photo Credit :

ಬೆಂಗಳೂರು: ಅನಿರೀಕ್ಷಿತ, ಅಕಾಲಿಕವಾಗಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಹಾಗೂ ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕಳೆದ ಮೂರು ದಿನಗಳಲ್ಲಿ ಬೆಳೆ ಹಾಗೂ ಪ್ರಾಣ ಹಾನಿಯಾದ ಬಗ್ಗೆ ವರದಿ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 3 ದಿನಗಳಲ್ಲಿ ಒಳನಾಡಿನಲ್ಲಿ ಹೆಚ್ವಿನ ಮಳೆಯಾಗಿ, ಬೆಳೆ ಹಾನಿಯಾಗಿದೆ. ಹಲವಾರು ಸಂಪರ್ಕ ರಸ್ತೆ, ಕೆಲವೆಡೆ ಸಾವುಗಳಾಗಿರುವುದು ಸಮೀಕ್ಷೆಯ ವರದಿಯಲ್ಲಿ ಉಲ್ಲೇಖವಾಗಿದೆ ಎಂದರು.

ಜುಲೈ, ಆಗಸ್ಟ್, ಸೆಪ್ಟೆಂಬರ್ ಮಾಹೆಗಳಲ್ಲಿ ಸುಮಾರು 3 ಲಕ್ಷ ರೈತರ ಬೆಳೆಹಾನಿಯಾಗಿದ್ದರಿಂದ ಪರಿಹಾರ ಮೊತ್ತವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಈ ಪೈಕಿ ಬಾಕಿಯಿದ್ದ ₹ 130 ಕೋಟಿಗಳನ್ನು ಡಿಬಿಟಿ ಮೂಲಕ ವಿತರಿಸಲು ಸೂಚಿಸಲಾಗಿದೆ
ಎಂದು ತಿಳಿಸಿದರು.

ಮೊನ್ನೆ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವೀಡಿಯೊ ಸಂವಾದದಲ್ಲಿ ಸಮೀಕ್ಷೆಯ ವರದಿಯನ್ನು ಕೂಡಲೇ ಸಲ್ಲಿಸಲು ಸೂಚಿಸಲಾಗಿದೆ. ನಿರಂತರ ಮಳೆಯಿಂದಾಗಿ ಸಮೀಕ್ಷೆ ನಡೆಸುವುದೂ ಕಷ್ಟವಾಗಿದೆ. ಮಳೆ ತಗ್ಗಿರುವ ಪ್ರದೇಶಗಳಲ್ಲಿ ಪ್ರಾಥಮಿಕ ಸಮೀಕ್ಷೆ ಕೈಗೊಳ್ಳಲು ಸೂಚಿಸಿದ್ದು, ಈಗಾಗಲೇ ಕೆಲವೆಡೆ ಸಮೀಕ್ಷೆಗಳು ಪ್ರಾರಂಭವಾಗಿದೆ. ಪರಿಹಾರ ಪೋರ್ಟಲ್ ನಲ್ಲಿ ಮಾಹಿತಿ ಅಪ್ ಲೋಡ್ ಆಗುತ್ತಿದೆ ಎಂದ ಸಿಎಂ, ಹಲವು ಸಚಿವರು ಆಯಾ ಜಿಲ್ಲೆಗಳಲ್ಲಿ ಇದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಆಯೋಗದ ಅನುಮತಿ ಪಡೆಯುವ ಅಗತ್ಯವಿದೆ. ಈ ಬಗ್ಗೆ ಆಯೋಗಕ್ಕೆ ಪತ್ರವನ್ನು ಬರೆಯಲಾಗುತ್ತಿದೆ ಎಂದು ತಿಳಿಸಿದರು.

ಬೆಂಗಳೂರು ಬಗ್ಗೆ ಸರಕಾರಕ್ಕಿದೆ ಕಾಳಜಿ: ನಗರ ಪ್ರದಕ್ಷಿಣೆ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಎಚ್.ಎಸ್.ಆರ್. ಬಡಾವಣೆ, ರಾಜರಾಜೇಶ್ವರಿ ನಗರ, ಮಡಿವಾಳ ಕೋರಮಂಗಲಗಳಿಗೆ ಈಗಾಗಲೇ ಭೇಟಿ ನೀಡಿದೆ. ಬೆಂಗಳೂರಿನ ಬಗ್ಗೆ ಖಂಡಿತವಾಗಿ ಸರಕಾರಕ್ಕೆ ಕಾಳಜಿ ಇದೆ. ಮಳೆ ನಿಂತ ಕೂಡಲೇ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಸೂಚನೆ ನೀಡಿದೆ ಎಂದು ಹೇಳಿದರು.

ಇಂದು ಸಂಜೆ ಅಧಿಕಾರಿಗಳ ತುರ್ತು ಸಭೆ: ಅನಿರೀಕ್ಷಿತ ಮಳೆಯಿಂದ ಉಂಟಾದ ಹಾನಿ ಕುರಿತು ಚರ್ಚಿಸುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತುರ್ತು ಸಭೆಯನ್ನು ಕರೆದಿದ್ದಾರೆ. ಸಂಜೆ 7 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುವ ಸಭೆಗೆ ಹಲವು ಇಲಾಖೆಗಳ ಮುಖ್ಯಸ್ಥರು ಭಾಗಿಯಾಗಲು ಸೂಚಿಸಲಾಗಿದೆ.

ಗೃಹ ಇಲಾಖೆ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ, ಕೃಷಿ, ಸಣ್ಣ ನೀರಾವರಿ, ವಸತಿ ಇಲಾಖೆಗಳು ಹಾಗೂ ಕೆ.ಎಸ್.ಡಿ.ಎಂ.ಎ. ಮುಖ್ಯಸ್ಥರಿಗೆ ಸಭೆಯಲ್ಲಿ ಹಾಜರಿರುವಂತೆ ಸೂಚನೆ ನೀಡಲಾಗಿದೆ. ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಿಗೂ ಸಭೆಗೆ ಆಹ್ವಾನಿಸಲಾಗಿದೆ.

ವಿವಿಧ ಜಿಲ್ಲೆಗಳಿಂದ ಬಂದ ವರದಿಗಳನ್ನು ಪುನರ್ ಪರಿಶೀಲಿಸಿ, ನೆರವು ನೀಡುವ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಪರಿಹಾರ ಘೋಷಣೆ ಮಾಡುವ ಸಾಧ್ಯತೆ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು