ಬೆಂಗಳೂರು: ಪರಿಸರ ಸ್ನೇಹಿ ಗಣಪನಿಗೆ ಉತ್ತೇಜನ ನೀಡುವುದು ಹಾಗೂ ಪಿಒಪಿ ವಿಗ್ರಹಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಣ್ಣಿನ ಗಣೇಶ ವಿಗ್ರಹಗಳ ಎತ್ತರಕ್ಕೆ ಕಡಿವಾಣ ಹಾಕುವ ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ಚಿಂತನೆ ನಡೆಸಿದೆ.
ಎತ್ತರದ ಗಣೇಶನ ಮೂರ್ತಿಗಳಿಗೆ ಕಡಿವಾಣ ಹಾಕಲು ಚಿಂತನೆ ನಡೆಸಿದ್ದು, ಈ ಕುರಿತು ಸಭೆ ನಡೆಸಿ ತೀರ್ಮಾನ ಮಾಡಲಿದ್ದೇವೆ. ಈ ನಿಯಮ ಪಾಲನೆಯಾದರೆ ವಿಗ್ರಹಗಳನ್ನು ಸಾಗಿಸುವುದು ಸುಲಭವಾಗುತ್ತದೆ. ಜೊತೆಗೆ ಜಲ ಮಾಲಿನ್ಯ ಕೂಡ ಕಡಿಮೆಯಾಗಲಿದೆ’ ಎಂದು ಕೆಎಸ್ಪಿಸಿಬಿ ಮುಖ್ಯಸ್ಥ ಲಕ್ಷ್ಮಣ್ ಹೇಳಿದರು.
ಇನ್ನೂ ಪರಿಸರ ಸ್ನೇಹಿ ಗಣಪತಿ ತಯಾರಿಸುವವರಿಗೆ ಉತ್ತೇಜನ ನೀಡಲಾಗುವುದು ಎಂದಿದ್ದಾರೆ.