ಬೆಂಗಳೂರು: ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸಿಬೇಕು ಎಂದು ಆಗ್ರಹಿಸಿ ಕೆಎಸ್ ಆರ್ ಟಿಸಿ ಮತ್ತು ಟಿಎಂಟಿಸಿ ಸಿಬ್ಬಂದಿ ಏಪ್ರಿಲ್ 7ರಿಂದ ಅನಿರ್ದಿಷ್ಟ ಮುಷ್ಕರ ಮಾಡಲು ನಿರ್ಧರಿಸಿರುವರು.
ಕೆಎಸ್ ಆರ್ ಟಿಸಿ ಸಿಬ್ಬಂದಿಗಳು ಡಿಸೆಂಬರ್ 10,14ರಂದು ಮುಷ್ಕರ ನಡೆಸಿದ್ದರು. ತಮ್ಮನ್ನು ಸರ್ಕಾರಿ ಉದ್ಯೋಗಿಗಳಾಗಿ ಪರಿಗಣಿಸಬೇಕು ಎನ್ನುವ ಬೇಡಿಕೆಯನ್ನು ಕೆಎಸ್ ಆರ್ ಟಿಸಿ ಸಿಬ್ಬಂದಿಗಳು ಇಟ್ಟಿರುವರು. ಆದರೆ ರಾಜ್ಯ ಸರ್ಕಾರ ಈ ಬೇಡಿಕೆಯನ್ನು ತಿರಸ್ಕರಿಸಿದೆ.
ಬಂದ್ ನ್ನು ವ್ಯವಸ್ಥಿತವಾಗಿ ಆಯೋಜಿಸಲು ಕೆಎಸ್ ಆರ್ ಟಿಸಿ ಯೂನಿಯನ್ ನ ನಾಯಕರು ಪ್ರತೀ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಖಾಸಗಿ ಬಸ್ ಗಳಿಗೆ ಪ್ರಯಾಣಿಕರನ್ನು ಸಾಗಿಸಲು ರಾಜ್ಯ ಸರ್ಕಾರವು ಅನುವು ಮಾಡಿಕೊಡಲಿದೆ.