ಬೆಂಗಳೂರು: 2022ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಸ್ಪಷ್ಟ ನಿರ್ದೇಶನ ಸೇರಿದಂತೆ ರಾಜ್ಯ ಮಟ್ಟದ ಚಿಂತನ್ ಶಿಬಿರದಲ್ಲಿಬೆಂಗಳೂರು ಕೇವಲ 400 ಮಂದಿಯನ್ನು ಮಾತ್ರ ಆಹ್ವಾನಿಸಲಾಗಿದ್ದು, ಜಿಲ್ಲಾ ಮಟ್ಟದಲ್ಲೂ ಇದೇ ರೀತಿಯ ಶಿಬಿರ ನಡೆಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನಿರ್ಧರಿಸಿದೆ.
ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜ್ಯ ಘಟಕಗಳಿಗೆ ಪತ್ರ ಬರೆದಿದ್ದಾರೆ. ಈ ತಿಂಗಳ ಅಂತ್ಯದೊಳಗೆ ಶಿಬಿರಗಳನ್ನು ನಡೆಸಿ ಕೆಪಿಸಿಸಿಗೆ ವರದಿ ಕಳುಹಿಸುವಂತೆ ಅವರು ತಮ್ಮ ಪತ್ರದಲ್ಲಿ ಜಿಲ್ಲಾ ಘಟಕಗಳಿಗೆ ಸೂಚಿಸಿದ್ದಾರೆ.
ಎಲ್ಲ ಗ್ರಾ.ಪಂ.ಸದಸ್ಯರು, ಮಾಜಿ ಗ್ರಾ.ಪಂ., ತಾ.ಪಂ.ಸದಸ್ಯರು, ಜಿಪಂ ಸದಸ್ಯರು, ಶಾಸಕರು, ಕೆಪಿಸಿಸಿ ಮತ್ತು ಡಿಸಿಸಿ ಮುಖಂಡರು ತಪ್ಪದೇ ಈ ಶಿಬಿರದಲ್ಲಿ ಪಾಲ್ಗೊಳ್ಳಬೇಕು ಎಂದು ಡಿ.ಕೆ.ಶಿವಕುಮಾರ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. 2022 ರ ಚುನಾವಣೆಯಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ನಾಯಕರ ನಡುವೆ ಬಾಕಿ ಉಳಿದಿರುವ ಎಲ್ಲಾ ಸಮಸ್ಯೆಗಳನ್ನು ಶಿಬಿರಗಳು ಪರಿಹರಿಸಬೇಕು.