News Karnataka Kannada
Thursday, March 28 2024
Cricket
ಬೆಂಗಳೂರು ನಗರ

ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರೆಗೆ ನೀರು ಬಿಡಲು ಸಾಧ್ಯವಿಲ್ಲ

Photo Credit :

ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರೆಗೆ ನೀರು ಬಿಡಲು ಸಾಧ್ಯವಿಲ್ಲ

ಹೊಸದಿಲ್ಲಿ: ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರೆಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸೋಮವಾರ ತಿಳಿಸಿದೆ. “ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ  ಕುಡಿಯುವ ನೀರಿಗೆ ತೀವ್ರ ಅಭಾವವಿದೆ. ಪ್ರಸ್ತುತ ಜಲಾಶಯಗಳಲ್ಲಿರುವ ನೀರನ್ನು ತಮಿಳುನಾಡಿಗೆ ಹರಿಸಿದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತದೆ. ಹೀಗಾಗಿ ಡಿಸೆಂಬರ್ ಅಂತ್ಯದ  ಬಳಿಕವಷ್ಟೇ ತಮಿಳುನಾಡಿಗೆ ನೀರು ಬಿಡಲು ಸಾಧ್ಯ” ಎಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಗೆ ಹೇಳಿದೆ.

Can't release water from river Cauvery to TN till December: Govt tells SC-1ಕಳೆದ ಸೆಪ್ಚೆಂಬರ್ 20ರಂದು ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ನೀಡಿದ್ದ ಆದೇಶವನ್ನು ಕರ್ನಾಟಕ ಪಾಲಿಸುತ್ತಿಲ್ಲ ಎಂದು ತಮಿಳುನಾಡು ಸಲ್ಲಿಸಿರುವ ಅರ್ಜಿಯ  ವಿಚಾರಣೆ ಇಂದು ನಡೆಯುತ್ತಿದ್ದು, ವಿಚಾರಣೆಯಲ್ಲಿ ಕರ್ನಾಟಕ ಡಿಸೆಂಬರ್ ಅಂತ್ಯದವೆರಗೂ ನೀರು ಬಿಡಲು ಸಾಧ್ಯವಿಲ್ಲ ಎಂದು ತನ್ನ ವಾದ ಮಂಡಿಸಿದೆ.

ಕಾವೇರಿ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ಈ ವರೆಗೂ 3 ಮಧ್ಯಂತರ ಆದೇಶಗಳನ್ನು ನೀಡಿದ್ದು, ಈ ಮೂರು ಆದೇಶಗಳ ಅನ್ವಯ ಕರ್ನಾಟಕ ತಮಿಳುನಾಡಿಗೆ ಎಷ್ಟು  ಪ್ರಮಾಣದ ನೀರು ಹರಿಸಿದೆ ಎಂಬ ಲೆಕ್ಕಾಚಾರ ಮಾಡಬೇಕಿದೆ. ಈ ಹಿಂದೆ 52 ಟಿಎಂಸಿ ನೀರನ್ನು ಬಿಡುವಂತೆ ತಮಿಳುನಾಡು ಕೋರಿದೆಯಾದರೂ, ಈ ಸಂಬಂಧ ಸುಪ್ರೀಂ ಕೋರ್ಟ್ 3  ಮಧ್ಯಂತರ ಆದೇಶಗಳನ್ನು ಹೊರಡಿಸಿದೆ. ಹೀಗಾಗಿ ಈ ಆದೇಶಗಳ ಬಳಿಕ ಕರ್ನಾಟಕ ಹರಿಸಿದ ನೀರಿನ ಪ್ರಮಾಣದ ಲೆಕ್ಕಾಚಾರ ಬಿಳಿಗುಂಡ್ಲುವಿನ ಮಾಪನದಲ್ಲಿ ಇಂದು ನಡೆಯುವ  ಸಾಧ್ಯತೆ ಇದೆ. ಇದೇ ವೇಳೆ ಕಳೆದ ಸೆಪ್ಟೆಂಬರ್ 20ರಂದು ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಪರಿಷ್ಕರಿಸುವಂತೆ ಕರ್ನಾಟಕ ಇಂದು ಸುಪ್ರೀಂ ಕೋರ್ಟ್ ನಲ್ಲಿ ಮತ್ತೊಂದು ಅರ್ಜಿ ಸಲ್ಲಿಸಲಿದ್ದು,  ಅದರ ವಿಚಾರಣೆಯನ್ನೂ ಕೂಡ ನ್ಯಾಯಾಲಯ ಕೈಗೆತ್ತಿಕೊಳ್ಳಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು