News Karnataka Kannada
Saturday, April 20 2024
Cricket
ಬೆಂಗಳೂರು ನಗರ

ತಮಿಳುನಾಡಿನ ಅಂತರ್‌ರಾಜ್ಯ ನದಿ ಜೋಡಣೆ ಯೋಜನೆಗೆ ಒಪ್ಪಿಗೆ ನೀಡಬಾರದು : ಬಸವರಾಜ ಬೊಮ್ಮಾಯಿ

Bengaluru: Cm Bommai to visit Haveri, Dharwad districts
Photo Credit :

ಬೆಂಗಳೂರು: ಕರ್ನಾಟಕದ ಮೇಕೆದಾಟು ಯೋಜನೆಗೆ ಅನುಮತಿ ನೀಡುವವರೆಗೆ ತಮಿಳುನಾಡಿನ ಅಂತರ್‌ರಾಜ್ಯ          ಕಾವೇರಿ-ವೆಲ್ಲಾರು-ವೈಗೈ-ಗುಂಡಾರ್ ನದಿ ಜೋಡಣೆ ಯೋಜನೆಗೆ ಒಪ್ಪಿಗೆ ನೀಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ದೆಹಲಿಯಲ್ಲಿರುವ ಸಿಎಂ ಬೊಮ್ಮಾಯಿ ಅವರು ಗುರುವಾರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು.

ಶೇಖಾವತ್ ಅವರೊಂದಿಗಿನ ಸಭೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಹಲವು ನೀರಿನ ಯೋಜನೆಗಳ ಕುರಿತು ಚರ್ಚೆ ನಡೆಸಿದರು. ಮಾತುಕತೆ ವೇಳೆ ತಮಿಳುನಾಡಿನ ಅಂತರ್‌ರಾಜ್ಯ ಕಾವೇರಿ-ವೆಲ್ಲಾರು-ವೈಗೈ-ಗುಂಡಾರ್ ನದಿ ಜೋಡಣೆ ಯೋಜನೆಗೆ ಒಪ್ಪಿಗೆ ನೀಡಬಾರದು ಹಾಗೂ ಗೋದಾವರಿ-ಕೃಷ್ಣಾ-ಮಹಾನದಿ-ಕಾವೇರಿ ನದಿ ಜೋಡಣೆ ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು ಕರ್ನಾಟಕ ಸರ್ಕಾರದೊಂದಿಗೆ ಸಮಾಲೋಚಿಸದೆ ಮುಂದುವರಿಸಬಾರದು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆಂದು ತಿಳಿದುಬಂದಿದೆ.

ಇದೇ ವೇಳೆ ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆಯ ಸ್ಥಾನಮಾನ ನೀಡುವಂತೆಯೂ ಮುಖ್ಯಮಂತ್ರಿಗಳು ಮನವಿ ಮಾಡಿಕೊಂಡಿದ್ದಾರೆಂದು ವರದಿಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು