ಬೆಂಗಳೂರು : ಉಕ್ರೇನ್ನಿಂದ ಆಪರೇಷನ್ ಗಂಗಾ ಕಾರ್ಯಾಚರಣೆ ಮೂಲಕ ಬುಧವಾರ ಕರ್ನಾಟಕದ 31 ವೈದ್ಯಕೀಯ ವಿದ್ಯಾರ್ಥಿಗಳು ಬಂದಿದ್ದಾರೆ.ಉಕ್ರೇನ್ ನಿಂದ ಮಂಗಳವಾರ ರಾತ್ರಿ ದೆಹಲಿಯ ಕರ್ನಾಟಕ ಭವನದಲ್ಲಿ ತಂಗಿದ್ದ ಈ ವಿದ್ಯಾರ್ಥಿಗಳು ಬೆಂಗಳೂರಿಗೆ ಬಂದಿಳಿದ್ದಾರೆ.ಈ ಮೂಲಕ ಫೆ. 27 ರಿಂದ ಈವರೆಗೆ 86 ವಿದ್ಯಾರ್ಥಿಗಳು ರಾಜ್ಯಕ್ಕೆ ಮರಳಿದ್ದಾರೆ.
ಇನ್ನು ಉಕ್ರೇನ್ನಲ್ಲಿ ಸಿಲುಕಿರುವ ಸುಮಾರು 200 ಭಾರತೀಯರನ್ನು ಹೊತ್ತ ವಿಶೇಷ ವಿಮಾನವು ಇಂದು ರೊಮೇನಿಯಾದಿಂದ ದೆಹಲಿ ತಲುಪಿದೆ. ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತೀಯ ನಾಗರಿಕರನ್ನು ಕೇಂದ್ರ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಬರಮಾಡಿಕೊಂಡರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
‘ನಾವು ಕಷ್ಟಗಳ ನಡುವೆಯೂ ನಮ್ಮ ನಾಗರಿಕರನ್ನು ಮರಳಿ ಕರೆತರುತ್ತಿದ್ದೇವೆ. ಸಂಕಷ್ಟದಲ್ಲಿರುವ ಪ್ರತಿಯೊಬ್ಬ ಭಾರತೀಯರನ್ನು ತಲುಪುವುದು ಮೋದಿ ಸರ್ಕಾರದ ಮೂಲ ಸಿದ್ಧಾಂತವಾಗಿದೆ’ ಎಂದು ಚಂದ್ರಶೇಖರ್ ಮಾಧ್ಯಮಗಳಿಗೆ ತಿಳಿಸಿದರು.