ಬೆಂಗಳೂರು: ಹೆಚ್ಚುವರಿ ಚಾಲಕ ಮತ್ತು ಗೃಹ ಕಚೇರಿ ಕೃಷ್ಣದ ಕೆಲ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ದ್ವಿತೀಯ ಸಂಪರ್ಕಿತರು ಎನ್ನುವ ಕಾರಣಕ್ಕಾಗಿ ಯಡಿಯೂರಪ್ಪ ಅವರು ಕ್ವಾರಂಟೈನ್ ಗೆ ಒಳಗಾಗಿರುವರು. ಆದರೆ ತಾನು ಆರೋಗ್ಯವಾಗಿದ್ದೇನೆ ಮತ್ತು ಚಿಂತೆ ಮಾಡಬೇಡಿ ಎಂದು ಯಡಿಯೂರಪ್ಪ ಅವರು ಪತ್ರಿಕಾ ಹೇಳಿಕೆ ಹೊರಡಿಸಿದ್ದಾರೆ.
ಯಡಿಯೂರಪ್ಪ ಅವರು ಕಳೆದ ಕೆಲವು ಸಮಯದಿಂದ ಬಿಡುವಿಲ್ಲದೆ ಕೆಲಸ ಮಾಡುತ್ತಿರುವ ಕಾರಣದಿಂದಲೂ ಅವರು ಬಳಲಿರುವರು. ಹೀಗಾಗಿ ಅವರಿಗೆ ವೈದ್ಯರು ವಿಶ್ರಾಂತಿಗೆ ಕೂಡ ಸೂಚಿಸಿರುವರು. ಸೋಮವಾರ ಬಳಿಕ ಮತ್ತೊಮ್ಮೆ ಅವರು ಕೊರೋನಾ ಪರೀಕ್ಷೆಗೆ ಒಳಪಡಸಲಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.