ಬೆಂಗಳೂರು: ಯಾವ ರೈತರಿಗೂ ತೊಂದರೆಯಾಗದು ಬಿಡುವುದಿಲ್ಲ. ಕಸ್ತೂರಿ ರಂಗನ್ ವರದಿಯಿಂದ ರೈತರಿಗೆ ತೊಂದರೆಯಾಗುತ್ತಿದ್ದರೆ ಅಂಥ ಪ್ರದೇಶಗಳಲ್ಲಿ ಅದನ್ನು ಜಾರಿಗೊಳಿಸುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿಯಲ್ಲಿ ಶನಿವಾರ ಮಾತನಾಡಿ, ಎಲ್ಲೆಲ್ಲಿ ಕಸ್ತೂರಿ ರಂಗನ್ ವರದಿಯಿಂದ ರೈತರಿಗೆ ತೊಂದರೆಯಾಗುತ್ತದೆಯೋ ಅಲ್ಲೆಲ್ಲೂ ಅದು ಜಾರಿಯಾಗಲು ಬಿಡುವುದಿಲ್ಲ ಎಂದರು.
ಈಗ ನಡೆಯುತ್ತಿರುವ ರೈತರ ಪ್ರತಿಭಟನೆ ಹಿಂದೆ ಕಾಂಗ್ರೆಸ್ ಷಡ್ಯಂತ್ರ. ಆದರೆ ಸದ್ಯದಲ್ಲೇ ಇದಕ್ಕೆ ತಕ್ಕ ಉತ್ತರವನ್ನು ನೀಡಲಾಗುವುದು. ಪಕ್ಷದ ಕಾರ್ಯಕರ್ತರು ಸರಕಾರಗಳ ಜನಪರ ಅಭಿವೃದ್ಧಿ ಯೋಜನೆಗಳ ಬಗ್ಗೆ ಚಿಂತನೆಗಳನ್ನು ನಡೆಸುತ್ತಿದ್ದಾರೆ. ಇದಕ್ಕೆಲ್ಲ ಸರಿಯಾದ ಪರಿಹಾರ ಕಂಡುಹಿಡಿದು ವಿರೋಧಪಕ್ಷಗಳ ಎಲ್ಲ ಶೆಟ್ಟಿ ಯಂತ್ರಗಳಿಗೆ ತಕ್ಕ ಉತ್ತರ ನೀಡಬೇಕಿದೆ ಎಂದರು.