ಬೆಂಗಳೂರು: ರಾಜ್ಯಸಭೆಗೆ ಕರ್ನಾಟಕದಿಂದ ನಡೆದ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ನಾಲ್ಕು ಸ್ಥಾನಗಳಲ್ಲಿ ಬಿಜೆಪಿ ಮೂರು, ಕಾಂಗ್ರೆಸ್ ಒಂದು ಸ್ಥಾನಗಳನ್ನು ಗೆದ್ದುಕೊಂಡಿದೆ. ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೋಲು ಕಂಡಿದ್ದಾರೆ.
ಇಂದಿನ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಯ ನಿರ್ಮಲಾ ಸೀತಾರಾಮನ್ , ನಟ ಜಗ್ಗೇಶ್ ಮತ್ತು ಲೇಹರ್ ಸಿಂಗ್ ಸೇರಿ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ನ ಜೈರಾಂ ರಮೇಶ್ ಗೆಲುವು ಸಾಧಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ಗೆ 46 ಓಟು ಸಿಕ್ಕಿದ್ದು, ನಟ ಜಗ್ಗೇಶ್ ಗೆ 44, ಲೇಹರ್ ಸಿಂಗ್ ಗೆ 33 ಮತ್ತು ಜೈರಾಂ ರಮೇಶ್ ಗೆ 46 ಮತ ಸಿಕ್ಕಿದೆ.