News Karnataka Kannada
Friday, April 26 2024
ಬೆಂಗಳೂರು ನಗರ

ವಿಧಾನಸಭೆಯಲ್ಲಿ ಹೈಡ್ರಾಮ: ಮತ್ತಿಬ್ಬರು ಶಾಸಕರ ರಾಜೀನಾಮೆ

Photo Credit :

ವಿಧಾನಸಭೆಯಲ್ಲಿ ಹೈಡ್ರಾಮ: ಮತ್ತಿಬ್ಬರು ಶಾಸಕರ ರಾಜೀನಾಮೆ

ಬೆಂಗಳೂರು: ವಿಧಾನ ಸೌಧದಲ್ಲಿ ಇಂದು ಹೈಡ್ರಾಮ ನಡೆದಿದ್ದು, ರಾಜೀನಾಮೆ ನೀಡಲು ಬಂದಿದ್ದ ಸಚಿವ ಎಂಟಿಬಿ ನಾಗರಾಜ್ ಮತ್ತು ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ. ಸುಧಾಕರ್ ಅವರನ್ನು ಕಾಂಗ್ರೆಸ್ ನಾಯಕರು ಎಳೆದಾಡಿದ ಘಟನೆ ನಡೆಯಿತು.

ರಾಜೀನಾಮೆ ನೀಡಿದ ಸುಧಾಕರ್ ಅವರನ್ನು ಪ್ರಿಯಾಂಕ ಖರ್ಗೆ ಮತ್ತು ದಿನೇಶ್ ಗುಂಡೂರಾವ್ ಮತ್ತಿತರರ ಮುಖಂಡರು ಸುತ್ತುವರಿದು ಮಾತಿನ ಚಕಮಕಿ ನಡೆಸಿ, ಎಳೆದಾಡಿದರು. ಇದರ ಬಳಿಕ ಸಚಿವ ಜಾರ್ಜ್ ಅವರ ಕೊಠಡಿಗೆ ಕರೆದೊಯ್ದು ಸಂಧಾನಕ್ಕೆ ಪ್ರಯತ್ನಿಸಲಾಯಿತು.

ಇಬ್ಬರು ಶಾಸಕರು ರಾಜೀನಾಮೆ ನೀಡಿರುವುದನ್ನು ಸ್ಪೀಕರ್ ರಮೇಶ್ ಕುಮಾರ್ ಅವರು ದೃಢಪಡಿಸಿದರು. ಆದರೆ ಇದನ್ನು ಈಗಲೇ ಅಂಗೀಕರಿಸಲು ಆಗಲ್ಲ. ಜುಲೈ 17ರವರೆಗೆ ಸಮಯಾವಕಾಶ ನೀಡಿದ್ದೇನೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು