ರಾಮನಗರ: ಬನ್ನೇರುಘಟ್ಟದಿಂದ ಆಹಾರಕ್ಕಾಗಿ ಹುಡುಕಾಟ ನಡೆಸುತ್ತಿದ್ದ ವೇಳೆಯಲ್ಲಿ ಕಾಲು ಮುರಿದುಕೊಂಡು ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕಾಡಾನೆ ಸಿದ್ದ ಗುರುವಾರ ಮೃತಪಟ್ಟಿದೆ.
ಆಗಸ್ಟ್ ತಿಂಗಳಲ್ಲಿ ಕಾಲು ಮುರಿದುಕೊಂಡಿದ್ದ ಕಾಡಾನೆಗೆ ರಾಮನಗರದ ಮಂಚನಬೆಲೆಯ ಬಳಿ ಕಳೆದ 2-3 ತಿಂಗಳುಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಹಲವು ದಿನಗಳ ಕಾಲ ಅನಾರೋಗ್ಯ ಎದುರಿಸಿದ್ದ ಕಾಡಾನೆ ಚೇತರಿಕೆ ಕಾಣುವ ಲಕ್ಷಣಗಳು ಇರಲಿಲ್ಲ. ಆದರೆ ಕಳೆದ ಕೆಲವು ದಿನಗಳ ಹಿಂದೆ ಕಾಡಾನೆ ಸಿದ್ದ ಚೇತರಿಸಿಕೊಳ್ಳುತ್ತಿದೆ ಎಂದು ಹೇಳಲಾಗುತ್ತಿತ್ತು. ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೇ ಸಿದ್ದ ಮೃತಪಟ್ಟಿದೆ. ಸಿದ್ದನಿಗೆ ಕಾಡಾನೆಗೆ ಗುವಾಹಟಿ ಹಾಗೂ ಕೇರಳದ ವೈದ್ಯರು ಚಿಕಿತ್ಸೆ ನೀಡಿದ್ದರು. ಇಲಾಖೆಯು ವೈಲ್ಡ್ ಲೈಫ್ ಎಸ್ ಒಎಸ್ ಎಂಬ ಸಂಸ್ಥೆ ಸಹಕಾರದ ಜತೆಗೆ ಸಿದ್ದನ ಚಿಕಿತ್ಸೆ ಬಗ್ಗೆ ನಿಗಾ ವಹಿಸುತ್ತಿತ್ತು.