ಬೆಂಗಳೂರು: ತಾವರೆಕೆರೆಯಿಂದ ನೆಲಮಂಗಲಕ್ಕೆ ತೆರಳುತ್ತಿದ್ದ ಬಿಎಂಟಿಸಿ ಬಸ್ ವೊಂದು ಅರ್ಕಾವತಿ ನದಿಗೆ ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿದ್ದ 40 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಬಿಎಂಟಿಸಿ ಬಸ್ ತಾವರೆಕೆರೆಯಿಂದ ನೆಲಮಂಗಲಕ್ಕೆ ಹೋಗುತ್ತಿದ್ದ ಸಂದರ್ಭ ಇಂದು ಬೆಳಿಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗೆ ಸೇರಿದ ಬಸ್ ವೊಂದು ತಾವರೆಕೆರೆಯಿಂದ ಬೆಂಗಳೂರು ದಕ್ಷಿಣ ತಾಲೂಕಿನ ವರ್ತೂರು ಬಳಿ ಬರುತ್ತಿದ್ದಂತೆ ಎದುರಿಗೆ ವಾಹನವೊಂದು ಬಂದಿದ್ದು, ಈ ವೇಳೆ ಆ ವಾಹನ ಡಿಕ್ಕಿ ತಪ್ಪಿಸಲು ಹೋಗಿ ಬಸ್ ರಸ್ತೆ ಬದಿಯಲ್ಲಿದ್ದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಅರ್ಕಾವತಿ ನದಿಗೆ ಉರುಳಿ ಬಿದ್ದಿದೆ. ಬಸ್ ನಲ್ಲಿದ್ದ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕರು ಸೇರಿ 40 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.