News Kannada
Sunday, March 26 2023

ಬೆಂಗಳೂರು ನಗರ

ಅಪರಿಚಿತ ಕರೆಗಳಿಂದ ತಿಮ್ಮಕ್ಕನಿಗೆ ಜೀವ ಬೆದರಿಕೆ

Photo Credit :

ಅಪರಿಚಿತ ಕರೆಗಳಿಂದ ತಿಮ್ಮಕ್ಕನಿಗೆ ಜೀವ ಬೆದರಿಕೆ

ಬೆಂಗಳೂರು: ಸಾಲು ಮರದ ತಿಮ್ಮಕ್ಕ ಅವರಿಗೆ ಜೀವ ಬೆದರಿಕೆ ಇದ್ದು, ಆತ್ಮರಕ್ಷಣೆಗಾಗಿ ಗನ್ ಇಟ್ಟುಕೊಳ್ಳಲು ಅನುಮತಿ ನೀಡುವಂತೆ ಕೋರಿ ಅವರ ಸಾಕುಮಗ ಉಮೇಶ್ ಮಂಗಳವಾರ ನಗರ ಪೊಲೀಸ್ ಕಮಿಷನರ್ ಪ್ರವೀಣ್ ಸೂದ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

‘ತಿಮ್ಮಕ್ಕ ಸದ್ಯ ಪೀಣ್ಯದ ಸಾಬೂನು ಕಾರ್ಖಾನೆ ಲೇಔಟ್ನಲ್ಲಿ ನೆಲೆಸಿದ್ದಾರೆ. ಅಪರಿಚಿತ ಮೊಬೈಲ್ ಸಂಖ್ಯೆಗಳಿಂದ ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ. ಅಲ್ಲದೆ, ಪ್ರತಿದಿನ ರಾತ್ರಿ ಮನೆ ಸುತ್ತ ಅಪರಿಚಿತರ ಓಡಾಟ ಹೆಚ್ಚಾಗಿದೆ’ಎಂದು ಉಮೇಶ್ ಪತ್ರದಲ್ಲಿ ತಿಳಿಸಿದ್ದಾರೆ.

‘ಅಮೆರಿಕದಲ್ಲಿರುವ ನಕಲಿ ಎನ್ಜಿಒಗಳ ವಿರುದ್ಧವೂ ಅವರು ದೂರು ಕೊಟ್ಟಿದ್ದರು. ಅದು ಕೂಡ ಜೀವಕ್ಕೆ ಅಪಾಯ ತರುವ ಸಾಧ್ಯತೆ ಇದೆ.’‘ರಕ್ಷಣೆ ಕೋರಿ ಮುಖ್ಯಮಂತ್ರಿ ಹಾಗೂ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ. ಅಭದ್ರತೆ ಕಾರಣದಿಂದಲೇ ಹುಟ್ಟೂರು ಹುಲಿಕಲ್ಲು ಗ್ರಾಮ ತೊರೆದು ಬೆಂಗಳೂರಿಗೆ ಬಂದಿದ್ದೇವೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಮನೆಯಲ್ಲಿ ಕಳ್ಳತನ ನಡೆದಿದೆ. ಈ ಎಲ್ಲ ಕಾರಣಗಳಿಂದ ಕನಿಷ್ಠ ಗನ್ ಇಟ್ಟುಕೊಳ್ಳುವುದಕ್ಕಾದರೂ ಅನುಮತಿ ನೀಡಬೇಕು’ ಎಂದು ಮನವಿ ಮಾಡಿದ್ದಾರೆ. ಭದ್ರತೆಗೆ ಸಿಬ್ಬಂದಿ ನೇಮಿಸಲು ಸಾಧ್ಯವಿಲ್ಲ, ಆದರೆ ಗನ್ ಪರವಾನಗಿಗೆ ಅನುಮತಿ ಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

See also  ಉಕ್ರೇನ್‌ನಿಂದ ಆಗಮಿಸುವವರ ನೆರವಿಗೆ ಇಬ್ಬರು ಅಧಿಕಾರಿಗಳ ನೇಮಕ: ಸಿಎಂ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು