News Kannada
Thursday, March 23 2023

ಬೆಂಗಳೂರು ನಗರ

ಲೋಕಸಭಾ ಚುನಾವಣಾ ಪ್ರಚಾರಕ್ಕೆ ಮಾಜಿ ಸಿಎಂ ಎಸ್.ಎಂ.ಕೃಷ್ಣ

Photo Credit :

 ಲೋಕಸಭಾ ಚುನಾವಣಾ ಪ್ರಚಾರಕ್ಕೆ ಮಾಜಿ ಸಿಎಂ ಎಸ್.ಎಂ.ಕೃಷ್ಣ

ಬೆಂಗಳೂರು: ಮುಂದಿನ ಲೋಕಸಭಾ ಕ್ಷೇತ್ರಗಳಲ್ಲಿ ಕೆಲವು ಕ್ಷೇತ್ರಗಳಲ್ಲಿ ಪ್ರಚಾರದಲ್ಲಿ ಭಾಗವಹಿಸುವುದಾಗಿ ಮಾಜಿ ಕೇಂದ್ರ ಸಚಿವ, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ತಿಳಿಸಿದ್ದಾರೆ.

ಕೃಷ್ಣ ಅವರ ಮನೆಗೆ ತೆರಳಿದ ಬಿಜೆಪಿ ನಾಯಕ ಆರ್. ಅಶೋಕ್ ಅವರು, ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವಂತೆ ಕೇಳಿಕೊಂಡಿದ್ದರು. ಇದಕ್ಕೆ ಕೃಷ್ಣ ಅವರು ಒಪ್ಪಿಗೆ ಕೂಡ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಮಂಡ್ಯ, ತುಮಕೂರು, ಮೈಸೂರು ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ಕೃಷ್ಣ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ.

ತಾನು ಮುಖ್ಯಮಂತ್ರಿ ಆಗಿದ್ದ ವೇಳೆ ಬೆಂಗಳೂರಿನ ಅಭಿವೃದ್ಧಿಗೆ ಕೈಗೊಂಡಿರುವಂತಹ ಕ್ರಮವನ್ನು ಜನರು ಮರೆತಿಲ್ಲ. ಈ ಚುನಾವಣೆಯಲ್ಲಿ ವ್ಯಕ್ತಿಗಿಂತ ಸಿದ್ಧಾಂತ ಮುಖ್ಯ. ಈ ಆಧಾರದ ಮೇಲೆ ಮತ ಯಾಚಿಸುವುದಾಗಿ ಕೃಷ್ಣ ತಿಳಿಸಿದರು.

See also  9ನೇ, ಪ್ರಥಮ ಪಿಯುಸಿ ತರಗತಿಗಳು ಆರಂಭ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

187

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು