ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಗಜಾನನ ಮಂಗಸೂಳಿ ಪರ ಪ್ರಚಾರ ಕೈಗೊಂಡ ಮಾಜಿ ಸಿಎಂ ಸಿದ್ದರಾಮಯ್ಯ, ಡಿ.9ರ ನಂತರ ರಾಜ್ಯದಲ್ಲಿ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ.
ಅಥಣಿ ಕ್ಷೇತ್ರದಲ್ಲಿ ಪ್ರಚಾರದ ವೇಳೆ ಮಾತನಾಡಿದ ಸಿದ್ದರಾಮಯ್ಯ, ಸಿಎಂ ಬಿಎಸ್.ಯಡಿಯೂರಪ್ಪ ಅವರು ಎಷ್ಟೇ ಹಣ ಖರ್ಚು ಮಾಡಿದರೂ, ಎಷ್ಟೇ ಸುತ್ತು ಹೊಡೆದರೂ 15 ಕ್ಷೇತ್ರಗಳಲ್ಲೂ ನಾವೇ ಗೆಲ್ಲುತ್ತೇವೆ. ಈ ಮಾತನ್ನು ಬಹಳ ವಿಶ್ವಾಸದಿಂದ ಹೇಳುತ್ತೇನೆ ಎಂದಿದ್ದಾರೆ.