News Kannada
Friday, March 24 2023

ಬೆಂಗಳೂರು ನಗರ

ಸುಲ್ವಾಡಿ ವಿಷ ಪ್ರಸಾದ ಪ್ರಕರಣ: ಸುಪ್ರೀಂನಲ್ಲಿ ಮಹಾದೇವ ಸ್ವಾಮಿಗೆ ಜಾಮೀನು ತಿರಸ್ಕೃತ

Photo Credit :

ಸುಲ್ವಾಡಿ ವಿಷ ಪ್ರಸಾದ ಪ್ರಕರಣ: ಸುಪ್ರೀಂನಲ್ಲಿ ಮಹಾದೇವ ಸ್ವಾಮಿಗೆ ಜಾಮೀನು ತಿರಸ್ಕೃತ

ಬೆಂಗಳೂರು: ಸುಲ್ವಾಡಿ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮಹಾದೇವ ಸ್ವಾಮಿಗೆ ಸುಪ್ರೀಂಕೋರ್ಟ್ ಸೋಮವಾರ ಜಾಮೀನು ನೀಡಲು ನಿರಾಕರಿಸಿದೆ.

ಜಸ್ಟಿಸ್ ಎನ್ ವಿ ರಾಮನ್ ಅವರನ್ನು ಒಳಗೊಂಡಿರುವ ಸುಪ್ರೀಂಕೋರ್ಟ್ ನ್ಯಾಯಪೀಠವು ಸ್ವಾಮಿಗೆ ಜಾಮೀನು ನಿರಾಕರಿಸಿದೆ.

ಡಿಸೆಂಬರ್ 14, 208ರಲ್ಲಿ ಸುಲ್ವಾಡಿಯ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವನೆ ಮಾಡಿ 17 ಮಂದಿ ಮೃತಪಟ್ಟಿದ್ದರು ಮತ್ತು 117 ಮಂದಿ ಅನಾರೋಗ್ಯಕ್ಕೆ ಒಳಗಾಗಿದ್ದರು. ಮಂದಿರವನ್ನು ತನ್ನ ವಶಕ್ಕೆ ಪಡೆದುಕೊಳ್ಳಬೇಕು ಎಂಬ ಉದ್ದೇಶವನ್ನಿಟ್ಟುಕೊಂಡು ಸ್ವಾಮಿ ಪ್ರಸಾದಕ್ಕೆ ಕೀಟನಾಶಕ ಬೆರೆಸಲು ಸಂಚು ಹೂಡಿದ್ದ ಎಂದು ತನಿಖೆಯಿಂದ ತಿಳಿದುಬಂದಿತ್ತು.

ಈ ಘಟನೆಯ ಬಳಿಕ ರಾಜ್ಯ ಆರೋಗ್ಯ ಇಲಾಖೆಯು ದೇವಸ್ಥಾನದಲ್ಲಿ ಪ್ರಸಾದ ಮತ್ತು ಅನ್ನಸಂತರ್ಪಣೆ ಮಾಡಲು ಕೆಲವೊಂದು ನಿಯಮಾವಳಿಗಳನ್ನು ರೂಪಿಸಿತ್ತು. ಘಟನೆ ಬಳಿಕ ದೇವಸ್ಥಾನಕ್ಕೆ ಬೀಗ ಜಡಿಯಲಾಗಿತ್ತು. ಈಗ ರಾಜ್ಯ ಮುಜರಾಯಿ ಇಲಾಖೆಯು ಇದರ ಅಧಿಕಾರ ನೋಡಿಕೊಳ್ಳುತ್ತಿದೆ.

See also  ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ವಯಸ್ಕ ಸಂತ್ರಸ್ತೆಯ ಗರ್ಭಪಾತಕ್ಕೆ ಸಮ್ಮತಿಸಿದ ಹೈಕೋರ್ಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

187

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು