ಬೆಂಗಳೂರು : ಪರ-ವಿರೋಧಗಳ ತೀವ್ರ ಜಂಜಾಟದ ನಡುವೆಯೂ, ಗೋಹತ್ಯೆ ನಿಷೇಧ ಕಾನೂನು ಮಸೂದೆ ಅಂಗೀಕರಿಸಿದ ರಾಜ್ಯ ಸರ್ಕಾರ.
ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ, ಈ ಕಾನೂನು ಜಾರಿಗೆ ಬಂದಿದ್ದು, ಇದೀಗ ಇಂತಹ ಮಹತ್ವದ ಕಾನೂನಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೊಂಡಿದೆ.
ರಾಜ್ಯದಲ್ಲಿ ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಗೋಹತ್ಯೆ ನಿಷೇಧ ಕಾಯ್ದೆ ವಿಧಾನಸಭೆಯಲ್ಲಿ ಅಂಗೀಕರಿಸಲ್ಪಟ್ಟ ನಂತರ, ವಿಧಾನ ಪರಿಷತ್ ನಲ್ಲಿ ಅಂಗೀಕಾರಕ್ಕೂ ಮುನ್ನಾ ಅನಿರ್ಧಿಷ್ಠಾವಧಿಗೆ ಮುಂದೂಡಲಾಗಿತ್ತು. ಆದರೆ ಇಂತಹ ಮಹತ್ವದ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುವುದಕ್ಕೆ ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿತ್ತು. ಅಷ್ಟೇ ಅಲ್ಲದೆ ರಾಜ್ಯಪಾಲರ ಸಹಿಗಾಗಿ ಕಳಿಸಿಕೊಡಲಾಗಿತ್ತು.