ಬೆಂಗಳೂರು: ಇಂದು ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿರುವ ನೂತನ ಸಚಿವರ ಖಾತೆಗಳು ನಿರ್ಧಾರವಾಗಿತ್ತು ಅದರ ಕುರಿತಾಗಿ ಸಚಿವ ಸಂಪುಟ ವಿವರಗಳನ್ನು ಹಂಚಿಕೊಂಡಿದ್ದೆ. ಅಂತೆಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ‘ಸಪ್ತ’ ಶಾಸಕರು ಮಂತ್ರಿಗಿರಿ ಅಲಂಕರಿಸಿದ್ದಾರೆ.
ಎಸ್. ಅಂಗಾರ, ಸಿ.ಪಿ. ಯೋಗೇಶ್ವರ್, ಎಂ.ಟಿ.ಬಿ. ನಾಗರಾಜ್, ಆರ್.ಶಂಕರ್, ಅರವಿಂದ ಲಿಂಬಾವಳಿ, ಮುರುಗೇಶ ನಿರಾಣಿ, ಉಮೇಶ್ ಕತ್ತಿ ಸೇರಿ 7 ಮಂದಿ ನೂತನ ಸಚಿವರಾಗಿ ಸಿಗಬಹುದಾದ ಇಲಾಖೆಗಳ ಪಟ್ಟಿವನ್ನು ಊಹಿಸಲಾಗುತ್ತಿದೆ.
ಅದರಂತೆ ಪ್ರವಾಸೋದ್ಯಮ ಇಲಾಖೆ & ಸಾರ್ವಜನಿಕ ಹಾಗೂ ಸಂಪರ್ಕ ಇಲಾಖೆ, ಬೆಂಗಳೂರು ನಗರಾಭಿವೃದ್ಧಿ, ಇಂಧನ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ, ಅಬಕಾರಿ ಖಾತೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಂದು ಅಂದಾಜು ಮಾಡಲಾಗಿದೆ.