News Kannada
Saturday, April 01 2023

ಬೆಂಗಳೂರು ನಗರ

ಅಪಘಾತ: ಕಂಪನಿಯೊಂದರ ಸಹಾಯಕ ವ್ಯವಸ್ಥಾಪಕ ಸಾವು

Woman killed in accident, son Ashwin and husband critically injured
Photo Credit :

ಬೆಂಗಳೂರು: ನೀರಿನ ಟ್ಯಾಂಕರ್ ವಾಹನದ ಚಕ್ರ ಮೈಮೇಲೆ ಹರಿದು ರೋಹಿತ್ (35) ಎಂಬುವರು ಮೃತಪಟ್ಟಿದ್ದು, ಈ ಬಗ್ಗೆ ಎಚ್‌ಎಸ್‌ಆರ್‌ ಲೇಔಟ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.’ಎಚ್‌ಎಸ್‌ಆರ್ ಲೇಔಟ್‌ನ 27ನೇ ಮುಖ್ಯರಸ್ತೆಯ ಇಬ್ಬಲೂರು ಜಂಕ್ಷನ್‌ನಲ್ಲಿ ರೋಹಿತ್‌ ತೆರಳುತ್ತಿದ್ದರು. ಅತೀ ವೇಗವಾಗಿ ಬಂದ ಟ್ಯಾಂಕರ್, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿತ್ತು. ರಸ್ತೆಗೆ ಬಿದ್ದ ರೋಹಿತ್‌ ತಲೆ ಮೇಲೆ ಟ್ಯಾಂಕರ್‌ ಚಕ್ರ ಹರಿದು ಹೋಗಿತ್ತು.’

‘ಸ್ಥಳೀಯ ನಿವಾಸಿ ರೋಹಿತ್, ಕಟ್ಟಡ ನಿರ್ಮಾಣ ಕಂಪನಿಯೊಂದರ ಸಹಾಯಕ ವ್ಯವಸ್ಥಾಪಕ.

ದ್ವಿಚಕ್ರ ವಾಹನದಲ್ಲಿ ಮಂಗಳವಾರ ಬೆಳಿಗ್ಗೆ ಕೆಲಸಕ್ಕೆ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಪೊಲೀಸರು ಹೇಳಿದರು.

‘ತೀವ್ರ ಗಾಯಗೊಂಡ ರೋಹಿತ್ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಪ್ರತ್ಯಕ್ಷದರ್ಶಿಗಳ ಹೇಳಿಕೆ ಪಡೆಯಲಾಗಿದೆ. ಮೃತದೇಹವನ್ನು ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಟ್ಯಾಂಕರ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂದು ಗೊತ್ತಾಗಿದ್ದು, ಆತ ಸದ್ಯ ತಲೆಮರೆಸಿಕೊಂಡಿದ್ದಾನೆ’ ಎಂದೂ ತಿಳಿಸಿದರು.

See also  ೧ ವಾರದೊಳಗೆ ರೈತರ ಚಾಲ್ತಿ ಸಾಲ ಮನ್ನಾ ಘೋಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು