News Kannada
Sunday, April 02 2023

ಬೆಂಗಳೂರು ನಗರ

ಕೋವಿಡ್-19 : ಹಾಸ್ಟೆಲ್ ಮತ್ತು ಕ್ಲಸ್ಟರ್‌ಗಳ ನಿರ್ವಹಣೆಗೆ ವಿಶೇಷ ಮಾರ್ಗಸೂಚಿ

Photo Credit :

ಬೆಂಗಳೂರು: ಕೋವಿಡ್-19, ಹೊಸ ರೂಪಾಂತರ ಒಮಿಕ್ರಾನ್ ಸೋಂಕಿನ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ತಜ್ಞರು ವಸ್ತುಸ್ಥಿತಿಯನ್ನು ವಿವರಿಸಿದ್ದಾರೆ. ಈಗಿರುವ ಪರಿಸ್ಥಿತಿ ಗಮನಿಸಿದರೆ ಗಾಬರಿಯಾಗಬೇಕಿಲ್ಲ. ಹಾಸ್ಟೆಲ್ ಮತ್ತು ಕ್ಲಸ್ಟರ್‌ಗಳ ನಿರ್ವಹಣೆಗೆ ವಿಶೇಷ ಮಾರ್ಗಸೂಚಿಗಳನ್ನು ಹೊರಡಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗುರುವಾರ ಸಚಿವ ಸಂಪುಟ ಸಭೆಯಲ್ಲಿ ತಜ್ಞರ ತಂಡದೊಂದಿಗೆ ಮಾತನಾಡಿದ ನಂತರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ಅಲ್ಲಲ್ಲಿರುವ ಹಾಸ್ಟೆಲ್‌ಗಳ ನಿರ್ವಹಣೆಗೆ ಈಗಿರುವ ಎಸ್‌ಒಪಿ (ಪ್ರಮಾಣಿತ ಕಾರ್ಯಾಚರಣಾ ವಿಧಾನ) ಪುನರ್ ಪರಿಷ್ಕರಿಸಿ ನೀಡಲಾಗುತ್ತದೆ. ಹಾಸ್ಟೆಲ್ ನಿಭಾಯಿಸುವುದು, ಎರಡು ದಿನಗಳಿಗೊಮ್ಮೆ ಸ್ಯಾನಿಟೈಸ್ ಮಾಡುವುದು, ವಿದ್ಯಾರ್ಥಿಗಳು ಊಟ ನೀಡುವ ವೇಳೆ ಒಂದೇ ಸಲ ಬರದಂತೆ ವಿಭಾಗಿಸುವುದು, ಸಂದರ್ಶಕರಿಗೆ ನಿರ್ಬಂಧ, ಅಡುಗೆಯವರ ಸಹಿತ ಎಲ್ಲ ಸಿಬ್ಬಂದಿಗೆ ಕೋವಿಡ್ ಎರಡೂ ಲಸಿಕೆ ನೀಡುವುದು. ಐಸೋಲೇಶನ್ ಕೊಠಡಿ ಮಾಡುವುದು ಇತ್ಯಾದಿಗಳನ್ನು ಅದು ಒಳಗೊಂಡಿರುತ್ತದೆ. ಇದೇ ರೀತಿಯ ಎಸ್‌ಒಪಿ ಕ್ಲಸ್ಟರ್ ನಿರ್ವಹಣೆಗೂ ನೀಡಲಾಗುತ್ತದೆ ಎಂದರು.

ಇದಲ್ಲದೇ ಕೋವಿಡ್ ಲಸಿಕೆ ನೀಡುವುದಕ್ಕೆ ಈ ಹಿಂದಿನಂತೆ ವಿಶೇಷ ಅಭಿಯಾನಗಳನ್ನು ಮಾಡುವುದಕ್ಕೆ ಸಚಿವ ಸಂಪುಟ ಸಲಹೆ ಮಾಡಿದೆ. ಅದನ್ನು ಮುಂದುವರಿಸಲು ಕ್ರಮಕೈಗೊಳ್ಳಲಾಗುತ್ತದೆ. ಇದಲ್ಲದೇ ರಾಜ್ಯದ ಗಡಿಭಾಗದಲ್ಲಿರುವ ಕೋವಿಡ್ ಕಟ್ಟೆಚ್ಚರ ಮುಂದುವರಿಯುತ್ತದೆ. ಜೊತೆಗೆ ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ಇರುವ ಎಲ್ಲ ನಿಬಂಧನೆಗಳು ಕೂಡ ಮುಂದುವರಿಯುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

See also  ಕೋವಿಡ್ 19 ನಿಯಂತ್ರಣ ಹಿನ್ನೆಲೆ, ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 5 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು