News Kannada
Wednesday, March 22 2023

ಬೆಂಗಳೂರು ನಗರ

ಓಮೈಕ್ರಾನ್ ಸೋಂಕಿತರಾಗಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಸಂಪೂರ್ಣ ಗುಣಮುಖ

Photo Credit :

ಬೆಂಗಳೂರು: ಕೊರೊನಾ ವೈರಾಣುವಿನ ರೂಪಾಂತರಿ ಓಮೈಕ್ರಾನ್ ಸೋಂಕಿತರಾಗಿದ್ದ ಇಲ್ಲಿನ 34 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಸಂಪೂರ್ಣ ಗುಣಮುಖರಾಗಿದ್ದಾರೆ. ಅವರು ಮಂಗಳವಾರ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ದಕ್ಷಿಣ ಆಫ್ರಿಕಾಕ್ಕೆ ತೆರಳಿ ಅಲ್ಲಿಂದ ಡಿ.1ರಂದು ಮರಳಿದ್ದ ಅವರಿಗೆ, ಡಿ.2ರಂದು ಕೊರೊನಾ ಸೋಂಕು ದೃಢಪಟ್ಟಿತ್ತು.

ರಾಜ್ಯದಲ್ಲಿ ಹೊಸ ತಳಿಯ ವೈರಾಣುವಿನಿಂದ ಚೇತರಿಸಿಕೊಂಡ ಮೊದಲಿಗರು ಇವರು.ಅವರ ಮಾದರಿಯನ್ನು ವೈರಾಣುವಿನ ವಂಶವಾಹಿ ಸಂರಚನಾ ವಿಶ್ಲೇಷಣೆಗೆ (ಜೀನೋಮ್‌ ಸೀಕ್ವೆನ್ಸಿಂಗ್‌) ಕಳುಹಿಸಲಾಗಿತ್ತು. ಆ ಪ‍ರೀಕ್ಷಾ ವರದಿಯಲ್ಲಿ ಹೊಸ ತಳಿಯ ಸೋಂಕು ಇದೇ 12ರಂದು ದೃಢಪಟ್ಟಿತ್ತು. ಅವರು ಇಲ್ಲಿನ ಬೌರಿಂಗ್ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾಸಕ್ಕೆ ಒಳಗಾಗಿದ್ದರು. ಅವರನ್ನು ಮನೆಗೆ ಕಳುಹಿಸುವ ಮೊದಲು ಎರಡು ಬಾರಿ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಲಾಗಿದ್ದು, ಪೂರ್ಣ ಪ್ರಮಾಣದಲ್ಲಿ ಗುಣಮುಖರಾಗಿರುವುದು ದೃಢಪಟ್ಟಿದೆ.

ಕೋವಿಡ್ ಮಾರ್ಗಸೂಚಿ ಅನುಸಾರ 7 ದಿನಗಳು ಮನೆಯಲ್ಲಿಯೇ ಪ್ರತ್ಯೇಕವಾಸಕ್ಕೆ ಒಳಗಾಗುವಂತೆ ಆಸ್ಪತ್ರೆ ವೈದ್ಯರು ಸೂಚಿಸಿದ್ದಾರೆ.

‘ಗುಣಮುಖರಾದ 34 ವರ್ಷದ ವ್ಯಕ್ತಿ ಮನೆಯಲ್ಲಿಯೇ ಏಳು ದಿನಗಳು ಪ್ರತ್ಯೇಕವಾಸಕ್ಕೆ ಒಳಪಡಬೇಕು. ಈ ಅವಧಿಯಲ್ಲಿ ಆರೋಗ್ಯ ಕಾರ್ಯಕರ್ತರು ನಿಯಮಿತವಾಗಿ ದೂರವಾಣಿ ಹಾಗೂ ಮನೆ ಭೇಟಿ ಮೂಲಕ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಆರು ದಿನಗಳ ನಂತರ ಮತ್ತೆ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಬೇಕು. ವರದಿ ನೆಗೆಟಿವ್ ಬಂದಲ್ಲಿ ಮನೆಯಿಂದ ಹೊರಗೆ ಬರಲು ಅನುಮತಿ ನೀಡಲಾಗುವುದು’ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

 

See also  ಚೆನ್ನೈ ಉಪನಗರ: 2 ಡೋಸ್ ಪಡೆದವರಿಗೆ ಮಾತ್ರ ರೈಲ್ವೆ ಟಿಕೆಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು