News Kannada
Wednesday, March 29 2023

ಬೆಂಗಳೂರು ನಗರ

ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು 5 ಪಟ್ಟು ಹೆಚ್ಚಿಸಿದ ರಾಜ್ಯ ಸರ್ಕಾರ

Bengaluru: Cm Bommai to visit Haveri, Dharwad districts
Photo Credit :

ಶೌರ್ಯ ಹಾಗೂ ಶೌರ್ಯೇತರ ಪ್ರಶಸ್ತಿ ಪಡೆದ ಯೋಧರಿಗೆ ರಾಜ್ಯ ಸರಕಾರ ನೀಡುವ ಅನುದಾನ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಅವರು ಇಂದು ಬೆಳಗಾವಿಯಲ್ಲಿ ವಿಜಯ್ ದಿವಸ್ ಅಂಗವಾಗಿ ಮುಖ್ಯಮಂತ್ರಿ ಮರಾಠಾ ಲೈಟ್ ಇನ್ಫೆಂಟ್ರಿ ರೆಜಿಮೆಂಟ್ ನ ತರಬೇತಿ ಶಾಲೆಯ ಯುದ್ಧ ಸ್ಮಾರಕಕ್ಕೆ ಗೌರವ ಸಲ್ಲಿಸಿದ ನಂತರ ಮಾತನಾಡಿದರು.

ಪರಮವೀರಚಕ್ರ ಪಡೆದವರಿಗೆ 25 ಲಕ್ಷದಿಂದ 1.5 ಕೋಟಿ ರೂ.ಗಳಿಗೆ, ಮಹಾವೀರಚಕ್ರ ವಿಜೇತರಿಗೆ 12 ಲಕ್ಷಕ್ಕೆ ಬದಲಾಗಿ 1 ಕೋಟಿ ರೂ.ಗಳು, ಅಶೋಕ ಚಕ್ರ ಪಡೆ ದವರಿಗೆ 25 ಲಕ್ಷ ರೂ.ಗಳಿಗೆ ಬದಲಾಗಿ 1.5 ಕೋಟಿ ರೂ.ಗಳು, ಕೀರ್ತಿ ಚಕ್ರ ಪಡೆವರಿಗೆ 1ಕೋಟಿ ರೂ.ಗಳು, ವೀರಚಕ್ರ ವಿಜೇತರಿಗೆ 50 ಲಕ್ಷ ರೂ.ಗಳು, ಶೌರ್ಯ ಚಕ್ರ ವಿಜೇತರಿಗೆ 50 ಲಕ್ಷ ರೂ.ಗಳು, ಸೇನಾ/ನೌಕಾ/ ವಾಯು ಸೇನಾ ಮೇಡಲ್ ಪಡೆದವರಿಗೆ 15 ಲಕ್ಷ ರೂ.ಗಳು, ಮೆನ್ಶನ್ ಎನ್.ಡಿ.ಎಸ್. ಪ್ಯಾಚ್ ಪಡೆದವರಿಗೆ 15 ಲಕ್ಷ ರೂ.ಗಳಿಗೆ ಹೆಚ್ಚಿಸಿ ಆದೇಶವನ್ನು ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಪ್ರಶಸ್ತಿ ವಿಜೇತರಿಗೆ ಸುಮಾರು ಐದು ಪಟ್ಟು ಅನುದಾನವನ್ನು ಹೆಚ್ಚಿಸಲಾಗಿದೆ. ಅವರ ಬಹಳ ವರ್ಷಗಳ ಬೇಡಿಕೆಯನ್ನು ಈಡೇರಿಸಿ ಆದೇಶವನ್ನು ಹೊರಡಿಸಿದೆ. ಇದು ಸೇನೆಗೆ ನಾವು ಸಲ್ಲಿಸುವ ಗೌರವ. ನಿವೃತ್ತರಾದ ಮೇಲೆ ಉತ್ತಮ ಜೀವನ ನಡೆಸಲು ಹಾಗೂ ಸಾವನ್ನಪ್ಪಿದಾಗ ಸಹಾಯ ಮಾಡುತ್ತಾ ಬಂದಿದ್ದೇವೆ. ಪ್ರಶಸ್ತಿ ಪಡೆದಾಗಲು ಅವರನ್ನು ಗೌರವಿಸುವ ನಿಟ್ಟಿನಲ್ಲಿ ಅನುದಾನವನ್ನು ಹೆಚ್ಚಿಸಲಾಗಿದೆ ಎಂದರು.

ಸೇನಾಪಡೆಗಳು ದೇಶದ ರಕ್ಷಣೆ ಮಾತ್ರವಲ್ಲದೆ ಆಂತರಿಕ ಭದ್ರತೆಯನ್ನು ಕಾಪಾಡುವಲ್ಲಿಯೂ ಮಹತ್ವದ ಪಾತ್ರ ವಹಿಸುತ್ತದೆ. ದೇಶದ ತಾಂತ್ರಿಕ ಬೆಳವಣಿಗೆ ಯಲ್ಲಿಯೂ ಸೇನಾಪಡೆಗಳು ಪ್ರಮುಖವಾದ ಪಾತ್ರವನ್ನು ನಿರ್ವಹಿಸುತ್ತವೆ. ಸೇನೆಯ ಬಗ್ಗೆ ನಮಗೆ ಅತ್ಯಂತ ಹೆಮ್ಮೆ ಇದೆ. ಪ್ರತಿ ಬಾರಿಯೂ ಗಡಿಯುದ್ದಕ್ಕೂ ಅವರು ಸವಾಲುಗಳನ್ನು ಎದುರಿಸುತ್ತಾರೆ. ಪೂರ್ವ , ಪಶ್ಚಿಮ, ಉತ್ತರ ಗಡಿಗಳಾಗಲಿ, ಅವರಿಗೆ ಎದುರಾದ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿ, ಶತ್ರುಪಡೆಗಳನ್ನು ಸೋಲಿಸಿದ್ದಾರೆ.

ವಿಶೇಷವಾಗಿ 1971 ರಲ್ಲಿ ನಡೆದ ಇಂಡೋ- ಪಾಕಿಸ್ತಾನ ಯುದ್ಧವು ನಮ್ಮ ಸೇನಾಪಡೆಯ ಶಕ್ತಿ, ಬುದ್ಧಿವಂತಿಕೆ, ಶೌರ್ಯ ಹಾಗೂ ಮೂರು ರಕ್ಷಣಾ ಪಡೆಗಳ ನಡುವಿನ ಸಮನ್ವಯಕ್ಕೆ ಸಾಕ್ಷಿಯಾಗಿದೆ ಎಂದರು.

ಮಧ್ಯರಾತ್ರಿ ನಡೆದ ದಾಳಿಗೆ ವಾಯುಪಡೆ, ನೌಕಾ, ಸೇನಾ ಪಡೆಗಳು ಎಚ್ಚೆತ್ತು ಯುದ್ಧಕ್ಕೆ ಪ್ರತ್ಯುತ್ತರ ನೀಡಿತು. 13 ದಿನಗಳ ಕಾಲ ನಡೆದ ಯುದ್ಧದಲ್ಲಿ 3863 ಯೋಧರು ಸಾವಿಗೀಡಾಗಿ, 9000 ಕ್ಕೂ ಹೆಚ್ಚು ಯೋಧರು ಗಾಯಾಳುಗಳಾದರು. ಪಾಕಿಸ್ತಾನದ 90,000 ಕ್ಕೂ ಹೆಚ್ವು ಸೈನಿಕರು ಶರಣಾಗಿ, ಭಾರತ ಜಯ ಗಳಿಸಿತು. ಇದು ಅತ್ಯುತ್ತಮ ಯುದ್ಧ ನಿರ್ವಹಣೆ ಯ ಪ್ರತೀಕ ಎಂದರು.

1971ರಲ್ಲಿ ಭಾರತದ ಮಿಲಿಟರಿ ಶಕ್ತಿಯನ್ನು ಇಡೀ ವಿಶ್ವವೇ ತಿರುಗಿ ನೋಡುವಂತಾಯಿತು. ಯುದ್ಧದಲ್ಲಿ ಮಡಿದವರ ಶೌರ್ಯಕ್ಕೆ ಮುಖ್ಯಮಂತ್ರಿಗಳು ನಮನ ಸಲ್ಲಿಸುವುದು ನಮ್ಮ ಕರ್ತವ್ಯ ಎಂದರು.

See also  ಆರ್.ಎಲ್.ಜಾಲಪ್ಪ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಬಸವರಾಜ ಬೊಮ್ಮಾಯಿ

ಮಿಲಿಟರಿಯಲ್ಲಿ ತಂತ್ರಜ್ಞಾನ ಬಳಕೆ
ಇತ್ತೀಚೆಗೆ ವಿಶ್ವದಲ್ಲಿ ತಂತ್ರಜ್ಞಾನ ಬಳಕೆ ಮಿಲಿಟರಿಯಲ್ಲಿ ಹೆಚ್ಚಾಗಿದೆ. ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಭಾರತವೂ ಯಾವ ದೇಶಕ್ಕೂ ಕಡಿಮೆಯಿಲ್ಲ. ನಮ್ಮ ಪ್ರಧಾನಿಗಳೂ ಈ ನಿಟ್ಟಿನಲ್ಲಿ ಭಾರತವನ್ನು ಸಶಕ್ತಗೊಳಿಸಿದ್ದಾರೆ.

ವಿಜಯ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಹೆಮ್ಮೆಯ ಸಂಗತಿಯಾಗಿದೆ. ಬಾಂಗ್ಲಾದೇಶವೂ ತನ್ನ ಸ್ವಾತಂತ್ರ್ಯ ದಿನವನ್ನು ಆಚರಿಸಿಕೊಳ್ಳಲು ಸಾಧ್ಯ ವಾಗಿರುವುದು ಭಾರತದ ಸೇನೆಯ ಸಹಾಯದಿಂದಾಗಿ. ನಮ್ಮನ್ನು ದೇಶದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಅಭಿವೃದ್ಧಿಗೆ ಮುಡಿಪಾಗಿಟ್ಟುಕೊಳ್ಳಬೇಕು. ಅದುವೇ ನಾವು ಸೇನಾಪಡೆಗಳಿಗೆ ಸಲ್ಲಿಸುವ ನಿಜ ನಮನ ಎಂದರು.

ಇದೇ ಸಂದರ್ಭದಲ್ಲಿ ಹೆಲಿಕಾಪ್ಟರ್ ದುರಂತದಲ್ಲಿ ಇತ್ತೀಚೆಗೆ ಮಡಿದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಎಲ್ಲರಿಗೂ ಶ್ರದ್ಧಾಂಜಲಿ ಸಲ್ಲಿಸಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ, ಮೇಜರ್ ಜನರಲ್ ಜೆ.ವಿ. ಪ್ರಸಾದ್ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು