News Kannada
Saturday, April 01 2023

ಬೆಂಗಳೂರು ನಗರ

ಸವಿತಾ ಸಮಾಜದಜಾತಿ ನಿಂದನೆ ನೋವಿನ ಸಂಗತಿ: ಎನ್.ಸಂಪತ್ ಕುಮಾರ್

Photo Credit :

ಬೆಂಗಳೂರು, ಡಿಸೆಂಬರ್-21: ಸವಿತಾ ಸಮಾಜದ ಮೇಲೆ ನಡೆಯುತ್ತಿರುವ ಜಾತಿ ನಿಂದನೆ ಅತ್ಯಂತ ನೋವಿನ ಸಂಗತಿಯಾಗಿದೆ. ಈ ಜಾತಿ ನಿಂದನೆ ತಡೆಯುವಂತೆ ಸರಕಾರ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರಬೇಕು ಎಂದು ಕರ್ನಾಟಕ ರಾಜ್ಯ ಸವಿತಾ ಸಮಾಜದ ಸರ್ವ ಸದಸ್ಯರ ಸಭೆಯಲ್ಲಿ ಒಕ್ಕೊರಲಿನ ಅಭಿಪ್ರಾಯ ವ್ಯಕ್ತವಾಯಿತು. ಜತೆಗೆ ಸವಿತಾ ಸಮಾಜದ ಸಮುದಾಯಕ್ಕೆ ರಾಜಕೀಯ ಮತ್ತು ಶೈಕ್ಷಣಿಕವಾಗಿ ಅಗತ್ಯ ಮೀಸಲಾತಿಗಳನ್ನು ಕೊಟ್ಟು ಸಮುದಾಯದ ಅಭಿವೃದ್ಧಿಗೆ ಸರಕಾರ ಮುಂದಾಗಬೇಕು ಎಂಬ ಒತ್ತಾಯವೂ ಕೇಳಿ ಬಂತು.

ಕರ್ನಾಟಕ ರಾಜ್ಯ ಸವಿತಾ ಸಮಾಜ ಸಂಘವು ಯಲಹಂಕದ ಹೊಯ್ಸಳ ಆಟದ ಮೈದಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಸಮುದಾಯದ ಮುಖಂಡರಿಂದ ಈ ಅಭಿಪ್ರಾಯ ವ್ಯಕ್ತವಾಯಿತು. ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಎನ್. ಸಂಪತ್ ಕುಮಾರ್ ಮಾತನಾಡಿ, ‘ಕೋವಿಡ್ ಇದ್ದುದರಿಂದ ಒಂದೂವರೆ ವರ್ಷಗಳ ಕಾಲ ನಾವು ಸರ್ವ ಸದಸ್ಯರ ಸಭೆ ನಡೆಸಲಾಗಲಿಲ್ಲ. ಈಗ ಅನುಮತಿ ಪಡೆದು ಸಭೆ ನಡೆಸುತ್ತಿದ್ದೇವೆ. ರಾಜ್ಯದ ನಾನಾ ಭಾಗಗಳಿಂದ ಸವಿತಾ ಸಮುದಾಯದ ಜನ ಆಗಮಿಸಿದ್ದಾರೆ’ ಎಂದರು.

ನಮ್ಮ ಸಮಾಜವು ಪ್ರತಿಯೊಬ್ಬರಿಗೂ ಕ್ಷೌರ, ಹೇರ್ ಕಟ್, ಮಸಾಜ್ ಇತ್ಯಾದಿಗಳ ಮೂಲಕ ಎಲ್ಲರಿಗುಜ ಅಗತ್ಯವಾದ ಸೇವೆಯನ್ನು ಕಲ್ಪಿಸುತ್ತಿದ್ದೇವೆ. ಆದರೆ ನಮ್ಮ ಸಮುದಾಯವನ್ನು ಜಾತಿಯಿಂದ ನಿಂದನೆ ಮಾಡುತ್ತಾರೆ. ಇದು ತುಂಬಾ ನೋವಿನ ಸಂಗತಿಯಾಗಿದೆ. ಸರಕಾರ ಸೂಕ್ತ ಕಾನೂನು ಮೂಲಕ ಜಾತಿ‌ ನಿಂದನೆಯನ್ನು ತಡೆಯಬೇಕು ಎಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸವಿತಾ ನಿಗಮದ ಅಧ್ಯಕ್ಷ ನರೇಶ್ ಕುಮಾರ್, ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಇಟಗಿ, ಸಂಘದ ಕಾರ್ಯಾಧ್ಯಕ್ಷ ಎಸ್. ಕಿರಣ್ ಕುಮಾರ್ ಮತ್ತಿತರ ಪದಾಧಿಕಾರಿಗಳು ಹಾಗೂ ರಾಜ್ಯದ ನಾನಾ ಭಾಗಗಳ ಸವಿತ ಸಮುದಾಯದ‌ ಮುಖಂಡರು, ಸಂಘದ ಸದಸ್ಯರು ಪಲ್ಗೊಂಡಿದ್ದರು.

 

 

See also  ಸಿಲಿಕಾನ್ ಸಿಟಿಯಾಗಲಿದೆ ಗಾರ್ಬೆಜ್ ಸಿಟಿ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

11671
Media Release

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು