News Kannada
Saturday, March 25 2023

ಬೆಂಗಳೂರು ನಗರ

ಅರೆಸ್ಟ್ ಮಾಡುವುದಾದರೆ ಮಾಡಲಿ, ಎಲ್ಲಕ್ಕೂ ನಾವು ಸಿದ್ಧ: ಸಿದ್ದರಾಮಯ್ಯ

Photo Credit :

ಬೆಂಗಳೂರು: ನಾವು ಕೋವಿಡ್ ನಿಯಮಾವಳಿಗಳನ್ನು ಪಾಲಿಸುತ್ತೇವೆ. ಅದರ ಪ್ರಕಾರವೇ ಮೇಕೆದಾಟು ಪಾದಯಾತ್ರೆಯನ್ನು ನಡೆಸುತ್ತೇವೆ. ಏನು ಕ್ರಮ ತೆಗೆದುಕೊಳ್ಳುತ್ತಾರೋ ತೆಗೆದುಕೊಳ್ಳಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಯಮದ ಪ್ರಕಾರ ಮಾಸ್ಕ್ ಧರಿಸಿ, ಸ್ಯಾನಿಟೈಸ್ ಮಾಡಿಕೊಂಡು ವ್ಯಕ್ತಿಗತ ಅಂತರವನ್ನು ಕಾಯ್ದುಕೊಂಡು ಕೈಗಳಿಗೆ ಗ್ಲೌಸ್ ಹಾಕಿಕೊಂಡೇ ಪಾದಯಾತ್ರೆ ಮಾಡುತ್ತೇವೆ ಎಂದರು.

15-20 ಮಂದಿ ಸೇರಿ ಪಾದಯಾತ್ರೆ ಮಾಡಿದರೆ ಸಮಸ್ಯೆ ಇಲ್ಲ, ಜನ ಸೇರಿಸಿದರೆ ಕ್ರಮಕೈಗೊಳ್ಳುತ್ತೇವೆ ಎಂಬ ಸಚಿವ ಕಾರಜೋಳ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸರಕಾರದಲ್ಲಿದ್ದಾರೆ ಅವರು ಏನು ಕ್ರಮ ತೆಗೆದುಕೊಳ್ಳುತ್ತಾರೆ ತೆಗೆದುಕೊಳ್ಳಲಿ. ನಾವು ಎಲ್ಲವನ್ನು ಎದುರಿಸಲು ಸಿದ್ಧರಿದ್ದೇವೆ. ನಾವು ಕಾನೂನಿಗೆ ಗೌರವ ಕೊಡುತ್ತೇವೆ, ಕಾನೂನು ಉಲ್ಲಂಘನೆ ಮಾಡಲ್ಲ. ಒಂದು ವೇಳೆ ಅವರು ಅರೆಸ್ಟ್ ಮಾಡುತ್ತೇವೆಂದರೆ ಮಾಡಲಿ ಎಂದರು.

ರಾಜ್ಯದ ಬೇರೆ ಕಡೆ ಇಲ್ಲದ ಕೆಲ ನಿಯಮ ರಾಮನಗರ ಜಿಲ್ಲೆಗೆ ಮಾತ್ರ ಏಕೆ ಮಾಡಲಾಗಿದೆ? ಬೇಕಂತಲೇ 144 ಸೆಕ್ಷನ್ ಹಾಕಿದ್ದಾರೆ. ಸರಕಾರ ನಮ್ಮ ಪಾದಯಾತ್ರೆ ನಿಲ್ಲಿಸಲು ಪ್ಲಾನ್ ಮಾಡಿದೆ. ಅನಗತ್ಯ ಗೊಂದಲ ಮಾಡುವ ಉದ್ದೇಶದಿಂದ ಸರಕಾರ 144 ಹಾಕಿದೆ. ನಾವು 15 ಜನಪಾದಯಾತ್ರೆ ಮಾಡಿದರೆ ಬಿಡುತ್ತೇವೆ ಅಂತ ಕಾರಜೋಳ ಹೇಳುತ್ತಾರೆ. 15 ಜನ ನಡೆದರೆ ಅದು 144 ಕಲಂ ಉಲ್ಲಂಘನೆ ಅಲ್ವಾ? ಎಂದು ಪ್ರಶ್ನಿಸಿದರು.

ಬಸವ ಬೊಮ್ಮಾಯಿ ನೀರಾವರಿ ಸಚಿವರಾಗಿದ್ದರು. ಅವರು ಏನು ಮಾಡಿದರು? ಬಿಜೆಪಿ ಎರಡುವರೆ ವರ್ಷದಿಂದ ಏನು ಮಾಡಿದೆ ಅಂತ ಲೆಕ್ಕ ಕೊಡಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು.

See also  2,46,207 ಕೋಟಿ ಈ ಬಾರಿಯ ಬಜೆಟ್ ನ ಒಟ್ಟು ಮೊತ್ತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು