News Kannada
Thursday, March 23 2023

ಬೆಂಗಳೂರು ನಗರ

ಅತಿಥಿ ಉಪನ್ಯಾಸಕರಿಗೆ ಕಾಲೇಜುಗಳ ಬದಲಾವಣೆಗೆ ಅವಕಾಶ ಕಲ್ಪಿಸಿದ ಶಿಕ್ಷಣ ಇಲಾಖೆ

Photo Credit :

ಬೆಂಗಳೂರು: ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಆಯ್ಕೆಯಾಗಿರುವ ಉಪನ್ಯಾಸಕರಿಗೆ ಕಾಲೇಜುಗಳ ಬದಲಾವಣೆಗೆ ಕಾಲೇಜು ಶಿಕ್ಷಣ ಇಲಾಖೆ ಅವಕಾಶ ಕಲ್ಪಿಸಿದೆ.

ಈಗಾಗಲೆ, ಕಾಲೇಜು ಶಿಕ್ಷಣ ಇಲಾಖೆಯು 10,600 ಹುದ್ದೆಗಳಿಗೆ ಮೊದಲ ಸುತ್ತಿನ ಕೌನ್ಸೆಲಿಂಗ್ ನಡೆಸಿ ಉಪನ್ಯಾಸಕರನ್ನು ಆಯ್ಕೆ ಮಾಡಿತ್ತು. ಉಪನ್ಯಾಸಕರು ಕಾಲೇಜುಗಳಿಗೆ ಹೋಗಿ ವರದಿ ಮಾಡಿಕೊಂಡಿದ್ದರು. ಆದರೆ, ಕಾಲೇಜು ದೂರ, ಅಲ್ಲಿನ ವಾತಾವರಣ ಸೇರಿದಂತೆ ಹಲವು ಕಾರಣಗಳಿಂದ ಕಾಲೇಜು ಬದಲಾವಣೆಗೆ ಉಪನ್ಯಾಸಕರು ಇಲಾಖೆಗೆ ಮನವಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಬೇರೆ ಕಾಲೇಜು ಆಯ್ಕೆ ಮಾಡಿಕೊಳ್ಳಲು ಎರಡನೇ ಸುತ್ತಿನ ಕೌನ್ಸೆಲಿಂಗ್‌ಗೆ ಅವಕಾಶ ಕಲ್ಪಿಸುವಂತೆ ಮುಚ್ಚಳಿಕೆ ಪತ್ರಕ್ಕೆ ಸಹಿ ಪಡೆದು ಕಾಲೇಜು ಬದಲಾವಣೆಗೆ ಅವಕಾಶ ಕಲ್ಪಿಸಲು ಇಲಾಖೆ ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ಸೂಚನೆ ನೀಡಿದ್ದಾರೆ.

ಕಾಲೇಜು ಬದಲಾವಣೆ ಕೋರಿ ಅರ್ಜಿ ಸಲ್ಲಿಸಿದ ನಂತರ ಉಪನ್ಯಾಸಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗುತ್ತದೆ. ಈ ಕಾರ್ಯಭಾರವನ್ನು ಮುಂದಿನ ಸುತ್ತಿನ ಕೌನ್ಸೆಲಿಂಗ್‌ಗೆ ಸೇರಿಸಲಾಗುವುದು. ತದನಂತರ ಯಾವುದೇ ಕಾರಣಕ್ಕೂ ಪುನಃ ಅದೇ ಕಾಲೇಜನ್ನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಎಲ್ಲ ಉಪನ್ಯಾಸಕರನ್ನು ಶೀಘ್ರದಲ್ಲೇ ನಡೆಯುವ ಎರಡನೇ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆಗೆ ಸೇರಿಸಿ ಒಟ್ಟಾರೆ ಲಭ್ಯವಾಗುವ ಕಾರ್ಯಭಾರದ ಆಧಾರದ ಮೇಲೆ ಕಾಲೇಜು ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

See also  ನಿವೃತ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಲೋಕಾಯುಕ್ತ ಹುದ್ದೆಗೆ ಆಯ್ಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು