News Kannada
Sunday, March 26 2023

ಬೆಂಗಳೂರು ನಗರ

ಉಕ್ರೇನ್‌ನಿಂದ 55 ಕರ್ನಾಟಕದ ವಿದ್ಯಾರ್ಥಿಗಳು ವಾಪಸ್

Photo Credit : Twitter

ಬೆಂಗಳೂರು; ‘ಆಪರೇಷನ್ ಗಂಗಾ’ ಕಾರ್ಯಾಚರಣೆ ಅಡಿಯಲ್ಲಿ ಯುದ್ಧಪೀಡಿತ ಉಕ್ರೇನ್‌ನಿಂದ 55 ಕರ್ನಾಟಕದ ವಿದ್ಯಾರ್ಥಿಗಳು ವಾಪಸ್ ಆಗಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಣೆ ಮಾಡಲು ನಡೆಯುತ್ತಿರುವ ‘ಆಪರೇಷನ್ ಗಂಗಾ’ ಕಾರ್ಯಾಚರಣೆ ಚುರುಕುಗೊಂಡಿದೆ. ಭಾರತೀಯ ವಾಯುಪಡೆ ಸಹ ಬುಧವಾರದಿಂದ ಕಾರ್ಯಾಚರಣೆಗೆ ಕೈ ಜೋಡಿಸಿದೆ.

ಕರ್ನಾಟಕ ಮೂಲದ 694 ವಿದ್ಯಾರ್ಥಿಗಳು ಉಕ್ರೇನ್‌ನ ವಿವಿಧ ಭಾಗಗಳಲ್ಲಿ ಸಿಲುಕಿದ್ದಾರೆ. ಮಂಗಳವಾರದ ತನಕ 8 ಬ್ಯಾಚ್‌ಗಳಲ್ಲಿ 55 ವಿದ್ಯಾರ್ಥಿಗಳು ರಾಜ್ಯಕ್ಕೆ ಮರಳಿದ್ದಾರೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ಈ ಕುರಿತು ಮಾಹಿತಿ ನೀಡಿದೆ.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೇಂದ್ರ ವಿದೇಶಾಂಗ ಇಲಾಖೆ ಜೊತೆ ನಿರಂತರ ಸಂಪರ್ಕದಲ್ಲಿದೆ. ಉಕ್ರೇನ್‌ನಲ್ಲಿ ಇನ್ನೂ ರಾಜ್ಯದ 455 ಜನರು ಸಿಲುಕಿದ್ದಾರೆ ಎಂದು ಅಂದಾಜಿಸಲಾಗಿದೆ. ಎಲ್ಲಾ ವಿದ್ಯಾರ್ಥಿಗಳನ್ನು ವಾಪಸ್ ಕರೆತರಲು ಪಯತ್ನ ನಡೆಸಲಾಗುತ್ತಿದೆ.

ಆಪರೇಷನ್ ಗಂಗಾ ಮೊದಲ ವಿಮಾನದಲ್ಲಿ ಮುಂಬೈಗೆ ಆಗಮಿಸಿದ್ದ 12 ಜನರು ಬೆಂಗಳೂರಿಗೆ ಮೊದಲ ಬ್ಯಾಚ್‌ನಲ್ಲಿ ಆಗಮಿಸಿದರು. ಫೆಬ್ರವರಿ 28ರಂದು 7 ಜನರು ದೆಹಲಿಗೆ, ಮಾರ್ಚ್ 1ರಂದು ದೆಹಲಿಗೆ 8, ಮುಂಬೈಗೆ 8 ಕರ್ನಾಟಕದ ವಿದ್ಯಾರ್ಥಿಗಳು ಆಗಮಿಸಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿರುವ ಕರ್ನಾಟಕ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಣೆ, ಕುಟುಂಬಕ್ಕೆ ನೈತಿಕ ಧೈರ್ಯ ತುಂಬಲು ಕೆಎಸ್‌ಡಿಎಂಎ ತಂಡವೊಂದನ್ನು ರಚನೆ ಮಾಡಿದೆ. ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಉಕ್ರೇನ್‌ನಲ್ಲಿ ಸಿಲುಕಿರುವ ಜನರ ಕುಟುಂಬದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ.

See also  ಡಿಕೆಶಿಗೆ ಹೈಕೋರ್ಟ್ ನಲ್ಲಿ ಮತ್ತೊಂದು ಹಿನ್ನಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು