News Kannada
Tuesday, March 28 2023

ಬೆಂಗಳೂರು ನಗರ

ಯುವಕನ ಹತ್ಯೆ ಪ್ರಕರಣ: ಪೊಲೀಸ್ ಕಮೀಷನರ್ ಸುಳ್ಳು ಹೇಳಿದ್ದಾರೆ-ರವಿಕುಮಾರ್ ಆರೋಪ

Photo Credit :

ಬೆಂಗಳೂರು : ಜೆ.ಜೆ.ನಗರದಲ್ಲಿ ನಡೆದ ಯುವಕನ ಹತ್ಯೆ ಪ್ರಕರಣದ ಬಗ್ಗೆ ಪೊಲೀಸ್ ಕಮೀಷನರ್ ಸುಳ್ಳು ಹೇಳಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ರವಿಕುಮಾರ್, ಜೆ.ಜೆ.‌ ನಗರದಲ್ಲಿ ಚಂದ್ರು ಎಂಬ ಯುವಕನ ಹತ್ಯೆ ಪ್ರಕರಣ ವಿಚಾರವಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಉರ್ದು ಭಾಷೆ ಬರಲಿಲ್ಲ ಎಂಬ ಕಾರಣಕ್ಕೆ ಹತ್ಯೆ ಮಾಡಲಾಗಿದೆ ಎಂಬುದು ನಿಜ ಎಂದಿದ್ದಾರೆ.

ಚಂದ್ರು ಹತ್ಯೆ ಪ್ರಕರಣದ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿರುವುದು ಸುಳ್ಳು. ಚಂದ್ರು ಸ್ನೇಹಿತ ಸೈಮನ್ ಹಾಗೂ ಚಂದ್ರು ತಾಯಿ, ಆತನ ಅಕ್ಕಪಕ್ಕದ ಮನೆಯವರು ಕೂಡ ಉರ್ದು ಭಾಷೆ ಬರಲ್ಲ ಎಂಬ ಕಾರಣಕ್ಕೆ ಹತ್ಯೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಘಟನಾ ಸ್ಥಳದಲ್ಲಿ ಚಂದ್ರು ಜತೆಗಿದ್ದ ಸ್ನೇಹಿತನೇ ಹೇಳಿದ್ದು ಸುಳ್ಳಾಗಲು ಸಾಧ್ಯವಿಲ್ಲ. ಇದಕ್ಕಿಂತ ಹೆಚ್ಚಿನ ಸಾಕ್ಷಿ ಬೇಕೆ ? ಎಂದು ಪ್ರಶ್ನಿಸಿದ್ದಾರೆ.

ಚಂದ್ರು ಹತ್ಯೆ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಯಬೇಕು. ಭಾಷೆ ವಿಚಾರವಾಗಿಯೇ ಹತ್ಯೆ ನಡೆದಿದೆ ಎಂದು ರವಿಕುಮಾರ್ ಹೇಳಿದ್ದಾರೆ.

See also  ಕೊರೊನಾ ಲಸಿಕೆ ಪಡೆದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು