News Kannada
Wednesday, May 31 2023
ಬೆಂಗಳೂರು ನಗರ

ಬೆಂಗಳೂರು: ನಾವು ವ್ಯಕ್ತಿ ಪೂಜೆ ಮಾಡಲ್ಲ ಎಂದ ಸಚಿವ ಸುನಿಲ್ ಕುಮಾರ್

Money is your election agenda, not Hindutva: Sunil Kumar to Muthalik
Photo Credit : Facebook

ಬೆಂಗಳೂರು: ಬಸವರಾಜ ಬೊಮ್ಮಾಯಿ ಸರ್ಕಾರ 28ರಂದು ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಜನೋತ್ಸವದ ಮೂಲಕ ಜನರ ಮುಂದೆ ಹೋಗುತ್ತಿದ್ದೇವೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ವ್ಯಕ್ತಿ ಉತ್ಸವ ಮಾಡುತ್ತಿದ್ದಾರೆ. ಬಿಜೆಪಿ ಜನರನ್ನು ಮುಂದಿಟ್ಟುಕೊಂಡು ಜನೋತ್ಸವ ಮಾಡುತ್ತಿದ್ದೇವೆ. ಜುಲೈ 28ರಿಂದ 30ರ ವರೆಗೂ ಜನೋತ್ಸವ ಕಾರ್ಯಕ್ರಮ ನಡೆಯಲಿದೆ. 28ರಂದು ದೊಡ್ಡಬಳ್ಳಾಪುರ ಬಿಜೆಪಿ ಪಕ್ಷದಿಂದ ಕಾರ್ಯಕ್ರಮ ನಡೆಯಲಿದೆ. 29 ಹಾಗೂ 30 ರಂದು ಆಯಾ ಜಿಲ್ಲೆಗಳ ಪ್ರಮುಖ ಸ್ಥಳಗಳಲ್ಲಿ ಜನೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದರು. ಕಾಂಗ್ರೆಸ್ ಸಿದ್ದರಾಮಯ್ಯ ಉತ್ಸವ ಮಾಡ್ತಿದ್ದಾರೆ. ನಾವು ವ್ಯಕ್ತಿ ಪೂಜೆ ಮಾಡಲ್ಲ ಎಂದರು.

ವಿದ್ಯುತ್ ರಹಿತ ಮನೆಗೆ ಬೆಳಕು ಯೋಜನೆ ಅಡಿ ವಿದ್ಯುತ್ ಕೊಡಲಾಗುತ್ತಿದೆ. ಪರಿಶಿಷ್ಟ ಜಾತಿಗೆ 75 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಟ್ರಾನ್ಸ್ ಫಾರ್ಮರ್ ಒಂದು ವಾರದಲ್ಲಿ ಬದಲಾವಣೆ ಮಾಡುತ್ತಿದ್ದೇವೆ. ಬೆಂಗಳೂರಿನಲ್ಲಿ ಆಕ್ಯುಪೆನ್ಸಿ ಸರ್ಟಿಫಿಕೇಟ್ ಇಲ್ಲದೆ ಕಟ್ಟಡ ನಿರ್ಮಾಣಕ್ಕೆ ಕ್ಲಿಯರೆನ್ಸ್ ಕೊಡಲ್ಲ ಎಂದು ಹಿಂದಿನ ಕಾಂಗ್ರೆಸ್ ಸರ್ಕಾರ ಮಾಡಿತ್ತು. ನಾವು ಅದನ್ನ ಕೈಬಿಟ್ಟಿದ್ದೇವೆ. ಹೊಸದಾಗಿ 1,500 ಕಿ.ಮೀ ವಿದ್ಯುತ್ ಕೇಬಲ್ ಎಳೆದಿದ್ದೇವೆ. 200 ಕಡೆ ಸಬ್ ಸ್ಟೇಷನ್ ಉನ್ನತೀಕರಣ ಮಾಡಿದ್ದೇವೆ. ಒಂದೊಂದು ಇಲಾಖೆ ಮುಖಾಂತರ ಜನರ ತಲುಪೋ ಕೆಲಸ ಮಾಡುತ್ತಿದ್ದೇವೆ ಎಂದರು.

 

See also  ಬೆಂಗಳೂರಿನಲ್ಲಿ ನಂದಿನಿ ನಕಲಿ ತುಪ್ಪದ ಜಾಲ ಪತ್ತೆ: ಕೆಎಂಎಫ್ ಅಧಿಕಾರಿಗಳಿಂದ ಪರಿಶೀಲನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು