News Kannada
Thursday, September 28 2023
ಬೆಂಗಳೂರು ನಗರ

ಬೆಂಗಳೂರು: ಪ್ರವೀಣ್ ಹತ್ಯೆ ಪ್ರಕರಣ ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರ

Mandya: The Mysuru Sugar Factory has sanctioned Rs. 21 crore to sugarcane growers. Payment - CM Bommai
Photo Credit : Twitter

ಬೆಂಗಳೂರು: ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಿಎಂ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮಾಧ್ಯಮದವರೊಂದಿಗೆ ಮಾತನಾಡಿದಂತ ಅವರು, ಪ್ರವೀಣ್ ಹತ್ಯೆ ವ್ಯವಸ್ಥಿತವಾಗಿ ಆಗಿದೆ ಹಾಗೂ ಇದೊಂದು ಅಂತರರಾಜ್ಯ ವಿಚಾರವಾಗಿದೆ. ಡಿಜಿ, ಐಜಿ ಅವರ ಬಳಿ ಚರ್ಚಿಸಲಾಗಿದ್ದು, ಅದರ ಸಂಪೂರ್ಣ ಮಾಹಿತಿಯನ್ನು ಪಡೆಯಲು ಸೂಚಿಸಲಾಗಿದೆ. ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಮಾಹಿತಿ ಪಡೆದ ನಂತರ ಗೃಹ ಇಲಾಖೆ ಪತ್ರ ಬರೆಯಲಿದೆ.

ಸೂರತ್ಕಲ್‍ನಲ್ಲಿ ನಡೆದ ಹತ್ಯೆಯ ಬಗ್ಗೆಯೂ ತೀವ್ರಗತಿಯಲ್ಲಿ ತನಿಖೆಯಾಗಿ, ತಪ್ಪಿತಸ್ಥರನ್ನು ಬಂಧಿಸಬೇಕು. ಅದಕ್ಕೂ ಕೂಡ ತಂಡಗಳನ್ನು ರಚಿಸಿ ತನಿಖೆ ಪ್ರಾರಂಭ ಮಾಡಬೇಕೆಂದು ತೀರ್ಮಾನ ಮಾಡಲಾಗಿದೆ ಎಂದರು. ಜಿಲ್ಲಾ ಮಟ್ಟದಲ್ಲಿ ಧಾರ್ಮಿಕ ಮುಖಂಡರನ್ನ ಕರೆದು ಶಾಂತಿ ಸಭೆಗಳನ್ನು ಮಾಡುವ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

See also  ಸಿಡಿ ಪ್ರಕರಣದಲ್ಲಿ ರೋಚಕ ತಿರುವು, ಮಾಜಿ ಸಚಿವ ಡಿ. ಸುಧಾಕರ್ ಸಿಡಿ ಯುವತಿ ಜತೆ ನಂಟು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು