News Kannada
Monday, March 27 2023

ಬೆಂಗಳೂರು ನಗರ

ಬೆಂಗಳೂರು: ಸೆಪ್ಟೆಂಬರ್ 6 ರಾಜ್ಯ ಸರ್ಕಾರಿ ನೌಕರರ ದಿನಾಚರಣೆ!

Bengaluru: The budget session will be held from February 10 to 24.
Photo Credit : News Kannada

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಸೆಪ್ಟೆಂಬರ್ 6ರಂದು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸೇವಾ ಸಾಧಕರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಔತಣ ಸಭಾಂಗಣದಲ್ಲಿ ನಡೆಯಲಿರುವ ಈ ಸಮಾರಂಭಕ್ಕೆ ಹಾಜರಾಗುವ ಸರ್ಕಾರಿ ನೌಕರರಿಗೆ ಅರ್ಧ ದಿನದ ವಿಶೇಷ ಸಾಂದರ್ಭಿಕ ರಜೆಯ ಸೌಲಭ್ಯವನ್ನೂ ಕಲ್ಪಿಸಲಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜ್ಯ ಸರ್ಕಾರಿ ಸೇವೆಯಲ್ಲಿ ಅನುಪಮ ಸೇವೆ ಸಲ್ಲಿಸಿ ಗಮನಾರ್ಹ ಸಾಧನೆ ಮಾಡಿರುವ 30 ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ 2022ನೇ ಸಾಲಿನ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಿಬ್ಬಂದಿ ಅವರು ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿರುವ ಈ ಎರಡೂ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದು, ಪ್ರಶಸ್ತಿಗೆ ಆಯ್ಕೆಯಾಗಿರುವ ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

See also  ಮಂಗಳೂರು: ಇಂದು ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು