News Kannada
Sunday, March 26 2023

ಬೆಂಗಳೂರು ನಗರ

ಬೆಂಗಳೂರು: ಸಾರಿಗೆ ಸಚಿವ ಶ್ರೀರಾಮಲು ವಿರುದ್ಧ ಬೃಹತ್ ಪ್ರತಿಭಟನೆ

Bengaluru: Massive protest against Transport Minister Sriramulu
Photo Credit : G Mohan

ಬೆಂಗಳೂರು: ಸಾರಿಗೆ ಸಚಿವರ ನಿರ್ಲಕ್ಷ್ಯ ಹಾಗೂ ಇಲಾಖೆಯಲ್ಲಿ ನಡೆಯುತ್ತಿರುವ ಅಕ್ರಮಗಳಿಂದಾಗಿ ರಾಜ್ಯದಲ್ಲಿ ಸಾರಿಗೆ ನೌಕರರ ಆತ್ಮಹತ್ಯೆ ಪ್ರಕರಣಗಳು ಏರಿಕೆಯಾಗುತ್ತಿವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ 35ಕ್ಕೂ ಹೆಚ್ಚು ಸಾರಿಗೆ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದ ಕೇವಲ 15 ದಿನಗಳಲ್ಲಿ ಆರು ಸಾರಿಗೆ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೌಕರರಾದ ಹೊಳೆಬಸಪ್ಪ, ರಾಜ್‌ಕುಮಾರ್‌, ಬಸವರಾಜ್‌, ಈಶಣ್ಣ, ಭೀಮಾಶಂಕರ್‌ರವರು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.

ಹೀಗೆ ಸಾಲುಸಾಲು ನೌಕರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಸಚಿವರು ಹಾಗೂ ಅಧಿಕಾರಿಗಳು ನೌಕರರ ಶವ ನೋಡಲು ಹಾಗೂ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಕೂಡ ತೆರಳದಿರುವುದು ನಿಜಕ್ಕೂ ಅಮಾನವೀಯ. ಆತ್ಮಹತ್ಯೆಗಳನ್ನು ಖಂಡಿಸಿ ಆಮ್‌ ಆದ್ಮಿ ಪಾರ್ಟಿಯು ಪ್ರತಿಭಟನೆ ಮಾಡಿದ ನಂತರ ಸರ್ಕಾರವು ಡಿಪೋ ಮ್ಯಾನೇಜರ್‌ರೊಬ್ಬರನ್ನು ಅಮಾನತು ಮಾಡಿ ಸುಮ್ಮನಾಗಿದೆ. ಸಂತ್ರಸ್ತರಿಗೆ ಸೂಕ್ತ ಪರಿಹಾರ ಕೊಡಿಸಲು ಕೂಡ ಸಾರಿಗೆ ಸಚಿವರಿಗೆ ಸಾಧ್ಯವಾಗದಿರುವುದು ದುರಂತ.

2020 ಹಾಗೂ 2021ರಲ್ಲಿ ಕೋವಿಡ್‌ನಿಂದಾಗಿ 110ಕ್ಕೂ ಹೆಚ್ಚು ಸಾರಿಗೆ ನೌಕರರು ಬಲಿಯಾಗಿದ್ದಾರೆ. ಇವರ ಕುಟುಂಬಗಳಿಗೆ 30 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತಾದರೂ ಈವರೆಗೆ ಕೇವಲ ಏಳು ಕುಟುಂಬಗಳಿಗೆ ಮಾತ್ರ ಪರಿಹಾರ ದೊರೆತಿದೆ. ಸಾರಿಗೆ ಸಚಿವ ಶ್ರೀರಾಮುಲುರವರು ಕೋವಿಡ್‌ ಪರಿಹಾರ ದೊರಕಿಸಿಕೊಡುವುದರಲ್ಲೂ ವಿಫಲರಾಗಿರುವುದು ಇದರಿಂದ ಸ್ಪಷ್ಟವಾಗುತ್ತದೆ.

ಆದ್ದರಿಂದ ತಾವುಗಳು ಸಚಿವ ಶ್ರೀರಾಮುಲುರವನ್ನು ತಕ್ಷವೇ ಸಂಪುಟದಿಂದ ವಜಾ ಮಾಡಿ, ಯೋಗ್ಯ ವ್ಯಕ್ತಿಗೆ ಸಾರಿಗೆ ಸಚಿವ ಸ್ಥಾನವನ್ನು ನೀಡಬೇಕು. ಸಾರಿಗೆ ನೌಕರರ ಹಿತ ಕಾಪಾಡುವಂತಹ ಸಾರಿಗೆ ನೀತಿ ರೂಪಿಸಲು ತಜ್ಞರ ಸಮಿತಿ ರಚಿಸಬೇಕು ಎಂದು ಆಮ್‌ ಆದ್ಮಿ ಪಾರ್ಟಿಯು ಈ ಮೂಲಕ ಮನವಿ ಮಾಡುತ್ತಿದೆ.

See also  ಶಿವಮೊಗ್ಗ: ಗಲಾಟೆ ಪ್ರಕರಣ, ಪರಿಸ್ಥಿತಿ ಅವಲೋಕಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು