News Kannada
Friday, March 31 2023

ಬೆಂಗಳೂರು ನಗರ

ಬೆಂಗಳೂರು: ಮೋದಿ ಜನ್ಮದಿನದ ಅಂಗವಾಗಿ ಸಸಿ ನೆಟ್ಟ ಹಿರಿಯ ನಟ ಅನಂತನಾಗ್

actor Anant Nag planted a sapling to mark Pm Modi's birthday
Photo Credit : By Author

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಹುಟ್ಟುಹಬ್ಬದ ಅಂಗವಾಗಿ ಹಿರಿಯ ನಟ ಮತ್ತು ಮಾಜಿ ಸಚಿವ ಅನಂತನಾಗ್ ಅವರು ಕ್ಷೇತ್ರದ ಶಾಸಕ ಮತ್ತು ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರ ಜತೆಗೂಡಿ ಸದಾಶಿವ ನಗರದ ಪೂಜಾರಿ ಲೇಔಟ್ ನಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗಿಯಾದರು.

ಬಳಿಕ ಮಾತನಾಡಿದ ಅವರು, “ಮೋದಿಯವರು ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಅವರ ನಾಯಕತ್ವವು ದೇಶಕ್ಕೆ ಹೊಸ ಚೈತನ್ಯ ತಂದಿದೆ. ಭಗವಂತನು ಅವರಿಗೆ ಆಯುರಾರೋಗ್ಯ ಕೊಟ್ಟು ಕಾಪಾಡಲಿ” ಎಂದು ಹಾರೈಸಿದರು.

“ಅಶ್ವತ್ಥ ನಾರಾಯಣ ಅವರು ಮಲ್ಲೇಶ್ವರಂ ಕ್ಷೇತ್ರದ ಶಾಸಕರಾಗಿ ನಿರಂತರ ಮೂರು ಅವಧಿಯಿಂದ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರವನ್ನು ಇವರು ಮಾದರಿ ರೀತಿಯಲ್ಲಿ ಅಭಿವೃದ್ಧಿ ಪಡಿಸುತ್ತಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಅರುಣ್, ರಾಜೀವ್ ಮುಂತಾದವರು ಭಾಗವಹಿಸಿದ್ದರು.

See also  ಬೆಂಗಳೂರು: ಈದ್ಗ ಗೋಪುರ ನಾಶಪಡಿವುದಾಗಿ ಹೇಳಿಕೆ ನೀಡಿದ್ದ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

31125

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು